2:42 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಂಗಳೂರನ್ನು ರಾಜ್ಯದ 2ನೇ ನಗರವಾಗಿ ಅಭಿವೃದ್ಧಿಪಡಿಸುವ ಕನಸಿದೆ: ಗೃಹ ಸಚಿವ ಡಾ. ಪರಮೇಶ್ವರ್

30/11/2024, 20:12

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮುಶಕ್ತಿ ಸಮಾಜಕ್ಕೆ ಕಂಟಕ. ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿ ಬೆಳೆಯಲು ಅವಕಾಶ ಕೊಡಬೇಡಿ ಎಂದು ಈ ಹಿಂದೆ ಹೇಳಿದ್ದೆ. ಗೃಹ ಸಚಿನವಾಗಿ ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದಾಗ, ಇಲ್ಲಿ ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ್ದೆ. ಅದು ಬಹಳಷ್ಟು ಯಶಸ್ವಿಯಾಗಿದೆ ಎಂಬ ನಂಬಿಕೆಯಿದೆ. ಈಗ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.


ನಗರದ ಪಾಂಡೇಶ್ವರ ಪೊಲೀಸ್ ಲೇನ್ ನಲ್ಲಿ ನೂತನ ಪೊಲೀಸ್ ವಸತಿಗೃಹ ಉದ್ಘಾಟಿಸಿ ಅವರು ಮಾತನಾಡಿದರು.
ಕೋಮು ಶಕ್ತಿ ಹತ್ತಿಕ್ಕಲು ವಿಶೇಷ ವಿಂಗ್ ಮಾಡಿದ ಬಳಿಕ ಕಮ್ಯುನಲ್ ಹಿಂಸೆ ಕಡಿಮೆಯಾಗಿದೆ. ಈ ಭಾಗದಲ್ಲಿ ಶಾಂತಿ ನೆಲೆಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ಮಂಗಳೂರಿಗೆ ವಿಶೇಷ ಸ್ಥಾನ ಇತ್ತು. ನಾವು ಘಟ್ಟದವರು ಬಹಳ ಅಭಿಮಾನ ಇಟ್ಟು ಬರುತ್ತಿದ್ದೆವು. ಹಾಗೆ ಮಂಗಳೂರನ್ನು ಕರ್ನಾಟಕದ ಎರಡನೇ ಸಿಟಿಯಾಗಿ ಮಾಡಬೇಕೆಂಬ ಕನಸು ಇದೆ. ಇಲ್ಲಿ ಗೋಲ್ಡನ್, ಡೈಮಂಡ್ ಜುವೆಲ್ಲರಿ ತಯಾರಿಸುವ ಎಸ್ಇಝೆಡ್ ಮಾಡಬೇಕೆಂದು ಪ್ರಣಾಳಿಕೆ ಇದೆ‌. ಇನ್ನೂ ಮೂರು ವರ್ಷ ಇದೆ, ಮಾಡುತ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.
ಮೂರು ಬಾರಿ ಗೃಹ ಸಚಿವನಾಗಿದ್ದೇನೆ, ಬೇರೆ ಯಾರಿಗೂ ರಾಜ್ಯದಲ್ಲಿ ಇಂತಹ ಅವಕಾಶ ಸಿಕ್ಕಿಲ್ಲ. ಕೆಪಿಸಿಸಿ ಅಧ್ಯಕ್ಷನಾದಾಗ ಅದು ಆರು ತಿಂಗಳು ಅಷ್ಟೇ ಅಂತಿದ್ದರು.‌ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ.‌
ವೇದಿಕೆಯಲ್ಲಿ ಶಾಸಕ ಅಶೋಕ್ ರೈ, ಎಂಎಲ್ಸಿ ಐವಾನ್ ಡಿಸೋಜ, ಐಜಿಪಿ ಅಮಿತ್ ಸಿಂಗ್, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು