1:05 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕಳಪೆ ಔಷಧ ಕೊಟ್ಟು ಸರಕಾರವೇ ಬಾಣಂತಿಯರ ಕೊಂದಿದೆ: ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಆರೋಪ

01/12/2024, 16:14

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಳಪೆ ಗುಣಮಟ್ಟದ ಔಷಧ ನೀಡಿ ಸರ್ಕಾರವೇ ಬಾಣಂತಿಯರನ್ನು ಕೊಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಆರೋಪಿಸಿದ್ದಾರೆ.
ಬಾಣಂತಿಯರ ಸರಣಿ ಸಾವು ಸಂಭವಿಸದ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿದ ಅವರು ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಪಶ್ಚಿಮ ಬಂಗಾ ಫಾರ್ಮಸ್ಯುಟಿಕಲ್‌ ’ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಟ್ಟದ್ದು ಎಂದು ಗೊತ್ತಿದ್ದರೂ ಯಾರ ಒತ್ತಡದಲ್ಲಿ ಸರ್ಕಾರ ಅದನ್ನು ಖರೀದಿ ಮಾಡಿತು’ ಎಂದು ಪ್ರಶ್ನೆ ಮಾಡಿದರು.
ರಾಜ್ಯದಲ್ಲಿ 10 ತಿಂಗಳಲ್ಲಿ 111 ನವಜಾತ ಶಿಶುಗಳು ಮೃತಪಟ್ಟಿವೆ. ಬಳ್ಳಾರಿಯಲ್ಲಿ ನಾಲ್ವರು ಬಾಣಂತಿಯರು ಕೊನೆಯುಸಿರೆಳೆದಿದ್ದಾರೆ. ‌ಮೆಡಿಕಲ್ ಮಾಫಿಯಾದಿಂದ ಜನರಲ್ಲಿ ಆತಂಕ ಉಂಟಾಗಿದೆ. ಬಳ್ಳಾರಿಯಲ್ಲಿ ಐವಿ ದ್ರಾವಣ ನೀಡಿದ ಬಳಿಕ ಬಾಣಂತಿಯರಲ್ಲಿ ಬಹು ಅಂಗಾಂಗ ವೈಫಲ್ಯವಾಗಿದೆ. ಸರ್ಕಾರ ಖರೀದಿ ಮಾಡಿದ್ದ ಐವಿ ದ್ರಾವಣ ಔಷಧವಲ್ಲ ಬದಲಿಗೆ ಕೊಲೆ ಮಾಡುವ ರಾಸಾಯನಿಕವಾಗಿತ್ತು‌ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಪಶ್ಚಿಮ ಬಂಗಾ ಫರ್ಮಾಸ್ಯುಟಿಕಲ್‌’ ಕಂಪನಿಯ ಐವಿ ದ್ರಾವಣ ಕಳಪೆ ಗುಣಮಪಟ್ಟದ್ದು ಎಂದು ಆರು ತಿಂಗಳ ಹಿಂದೆ ಔಷಧ ನಿಯಂತ್ರಕರು ಹೇಳಿದ್ದರು.
ಐವಿ ದ್ರಾವಣದ 92 ಬ್ಯಾಚ್‌ಗಳಲ್ಲಿ 23 ಬ್ಯಾಚ್ ಕಳಪೆ ಗುಣಮಟ್ಟದ್ದು ಎಂದು ಅವರು ವರದಿ ನೀಡಿದ್ದರು. ಕಳಪೆ ಗುಣಮಟ್ಟದ್ದು ಎಂದು ಗೊತ್ತಿದ್ದರೂ ಸರ್ಕಾರ ಯಾಕೆ ಖರೀದಿ ಮಾಡಿತು. ಈ ಔಷಧ ಬಳಸಲು ಅನುಮತಿ ನೀಡಿದ ಬಲಾಢ್ಯರು ಯಾರು. ಇದಕ್ಕೆ ಯಾರ ಚಿತಾವಣೆ ಇದೆ. ಈ ಔಷಧಿ ಕಂಪನಿಯ ಅನ್ಸಾರಿ ಎಂಬುವವರ ಸಂಚಿನಿಂದ ಔಷಧ ಒಳ ಬಂದಿದೆ. ಅನ್ಸಾರಿ ಬಂಧನವಾದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದರು.
ರಾಜ್ಯ ಸರ್ಕಾರ ಕೇವಲ ರೂ. 2 ಲಕ್ಷ ಪರಿಹಾರ ನೀಡಿದೆ. ಸರ್ಕಾರಕ್ಕೆ ಬಡವರ ಜೀವದ ಬೆಲೆ ಗೊತ್ತಿಲ್ಲವೇ. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕು ಎಂದೂ ಅವರು ಕೇಳಿದರು.
ಬಳ್ಳಾರಿಯಲ್ಲಿ ಇಷ್ಟಾಗಿದ್ದರೂ, ಆರೋಗ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕಾಣೆಯಾಗಿದ್ದಾರೆ. ಯಾರೊಬ್ಬರೂ ಜಿಲ್ಲಾಸ್ಪತ್ರೆಗೆ ಬಂದಿಲ್ಲ. ಸರ್ಕಾರದ ಮಂತ್ರಿಗಳು ರಾಜೀನಾಮೆ ಕೊಡಬೇಕು. ರಾಜ್ಯದಲ್ಲಿ ಈ ವರ್ಷ ಇಲ್ಲಿವರೆಗೆ ಸಂಭವಿಸಿರುವ 28 ಬಾಣಂತಿಯರ ಸಾವಿನ ಕುರಿತು ಲೋಕಾಯುಕ್ತ ತನಿಖೆ ನಡೆಯಬೇಕು. ಇಲ್ಲದಿದ್ದಲ್ಲಿ ವಿರೋಧ ಪಕ್ಷದ ನಾಯಕನಾಗಿ ನಾನೇ ಲೋಕಾಯುಕ್ತರಿಗೆ ದೂರು ನೀಡುವೆ ಎಂದು ಎಚ್ಚರಿಸಿದರು.
ರೈತರು, ಅಧಿಕಾರಿಗಳಿಗೆ ಸರ್ಕಾರ ಆತ್ಮಹತ್ಯೆ ಭಾಗ್ಯ ನೀಡುತ್ತಿದ್ದರೆ, ನವಜಾತ ಶಿಶುಗಳಿಗೆ ಮತ್ತು ಬಾಣಂತಿಯರಿಗೆ ಸಾವಿನ ಭಾಗ್ಯ ಕರುಣಿಸುತ್ತಿದೆ. ಪರಿಸ್ಥಿತಿ ಹೀಗಿದ್ದರೂ, ಈಗ ಹಾಸನದಲ್ಲಿ ಸಮಾವೇಶ ಮಾಡುತ್ತಿರುವುದು ಯಾವ ಪುರಾಷರ್ಥಕ್ಕಾಗಿ. ಜನರು ಇನ್ನು ಮುಂದೆ ಎರಡು ಸಾವಿರ ರೂಪಾಯಿ ಬೇಡ, ಆರೋಗ್ಯ ಭಾಗ್ಯ ಕೊಡಿ ಎಂದು ಕೇಳುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು