2:07 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು