3:12 AM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು