5:05 PM Saturday21 - June 2025
ಬ್ರೇಕಿಂಗ್ ನ್ಯೂಸ್
ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು