3:07 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಭೀಕರ ರಸ್ತೆ ಅಪಘಾತ: ಹಾಸನದ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಸಾವು

01/12/2024, 23:38

ಹಾಸನ(reporterkarnataka.com): ಹಾಸನ ಸಮೀಪದ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾಸನಕ್ಕೆ ನೂತನ ಡಿಎಸ್ಪಿಯಾಗಿ ನಿಯುಕ್ತಿಗೊಂಡಿದ್ದ ಐಪಿಎಸ್ ಅಧಿಕಾರಿ ಹರ್ಷಭರ್ಜನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಡಿವೈಎಸ್ ಪಿಯಾಗಿ ನಿಯೋಜನೆಗೊಂಡ ಹರ್ಷಭರ್ಜನ್ ಡ್ಯೂಟಿ ರಿಪೋರ್ಟ್ ಮಾಡಲು ಬರುವಾಗ ಈ ದುರಂತ ನಡೆದಿದೆ. ಹರ್ಷಭರ್ಜನ್ ಅವರು ಸಂಚರಿಸುತ್ತಿದ್ದ ಜೀಪ್ ಇನ್ನೇನು ಕೆಲವೇ ನಿಮಿಷದಲ್ಲಿ ಹಾಸನ ತಲುಪ ಬೇಕೆನ್ನುವಸ್ಟರಲ್ಲಿ ಕಿತ್ತಾನೆ ಗಡಿ ಬಳಿ ಜೀಪ್ ನ ಟಯರ್ ಸ್ಫೋಟಗೊಂಡಿದೆ. ಸ್ಫೋಟಕದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಹರ್ಷ ಭರ್ಜನ್ ಅವರ ತಲೆಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚಾಲಕ ಮಂಜೇಗೌಡರಿಗೂ ಗಾಯಗಳಾಗಿವೆ.
ಶಾಂತಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು