9:14 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ದ.ಕ. ಕೈ ಕಚೇರಿಯಲ್ಲಿ ಕೈಕೈ ಮಿಲಾಯಿಸಿದರೇ ಕೈ ಮುಖಂಡರು?: ಖಾಕಿ ಎಂಟ್ರಿ ಕೊಟ್ಟಿರುವುದು ಯಾಕೆ?

02/12/2024, 15:20

ಮಂಗಳೂರು(reporterkarnataka.com): ಪಂಚಾಯಿತಿ ಉಪ ಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್​ ಪಕ್ಷದ ಕಚೇರಿಯಲ್ಲಿ ಹೊಡೆದಾಟ ನಡೆದಿದೆ.


ಜಿಲ್ಲಾ ಮುಖಂಡರು ಕೈಕೈ ಮಿಲಾಯಿಸಿದ್ದಾರೆ. ಪಂಚಾಯಿತಿ ಉಪ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಗೆದ್ದ ಅಭ್ಯರ್ಥಿ ಗಳನ್ನು ಸನ್ಮಾನಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದು, ನಂತರ ಅದು ಹೊಡೆದಾಟಕ್ಕೆ ತಿರುಗಿದೆ.
ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್​ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ತುಂಬೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ತಕ್ಷಣ ಕಾಂಗ್ರೆಸ್ ಕಚೇರಿಗೆ ಪೊಲೀಸರು ಆಗಮಿಸಿದ್ದಾರೆ. ಸಂಟ್ರಲ್ ಎಸಿಪಿ ಮತ್ತು ಕದ್ರಿ ಪೊಲೀಸರು ಆಗಮಿಸಿದ್ದಾರೆ. ಉಭಯ ಗುಂಪುಗಳ ನಡುವೆ
ಸಂಧಾನ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ಒಂದು ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು