9:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಬಂಟ್ವಾಳ: ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ

04/12/2024, 13:17

ಬಂಟ್ವಾಳ(reporterkarnataka.com):ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕದ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಾಗಾರ ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಕಳದ ಹಿರಿಯ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರೊಫೆಸನಲ್ ಏಥಿಕ್ಸ್ ನ ಬಗ್ಗೆ ತಮ್ಮ ಅಪಾರ ಅನುಭವ ಮತ್ತು ಹಿರಿತನದ ಅನುಭವಗಳನ್ನು ಸೇರಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳದ ಅಧ್ಯಕ್ಷರು ಉಮಾ ಎನ್. ಸೋಮಯಾಜಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧಿವಕ್ತಾ ಪರಿಷತ್ ನ ಸಮಾಜಿಕ ಕಾರ್ಯದ ಅಂಗವಾಗಿ ವಕೀಲರ ದಿನಾಚರಣೆಯ ಪ್ರಯುಕ್ತ ಪರಂಗಿಪೇಟೆ
ಅರ್ಕುಳದ ಮಾತಾ ಲಕ್ಷಣಿ ಶಾಂತಿಧಾಮ ಆಶ್ರಮಕ್ಕೆ 32,000/ ಮೌಲ್ಯದ ಫ್ರಿಜ್ ನ್ನು ಆಶ್ರಮದ ಸ್ಥಾಪಕರಾದ ಹರೀಶ್ ಪೆರ್ಗಡೆ ಅವರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಎಂ. ಕೆ. ವಿಜಯ್ ಕುಮಾರ್ ಅವರನ್ನು ವಕೀಲರ ಸಂಘ (ರಿ) ಬಂಟ್ವಾಳದ ವತಿಯಿಂದ ಸನ್ಮಾನಿಸಿ ಗೌರವಿಸಿಲಾಯಿತು. ವಕೀಲರ ಸಂಘ ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿ ಅಭ್ಯಾಗತರನ್ನು ಯುವ ವಕೀಲರು ಅದ ಸ್ವರ್ಣ ಗೌರಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಧಿವಕ್ತಾ ಪರಿಷತ್ ನ ಜಿಲ್ಲೆಯ ಸದಸ್ಯರಾದ ವೀರೇಂದ್ರ ಎಂ. ಸಿದ್ದಕಟ್ಟೆ ಧನ್ಯವಾದ ಸಲ್ಲಿಸಿದರು. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು