4:40 PM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಂಟ್ವಾಳ: ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ

04/12/2024, 13:17

ಬಂಟ್ವಾಳ(reporterkarnataka.com):ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕದ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಾಗಾರ ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಕಳದ ಹಿರಿಯ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರೊಫೆಸನಲ್ ಏಥಿಕ್ಸ್ ನ ಬಗ್ಗೆ ತಮ್ಮ ಅಪಾರ ಅನುಭವ ಮತ್ತು ಹಿರಿತನದ ಅನುಭವಗಳನ್ನು ಸೇರಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಮುಖ್ಯ ಅತಿಥಿಯಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳದ ಅಧ್ಯಕ್ಷರು ಉಮಾ ಎನ್. ಸೋಮಯಾಜಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧಿವಕ್ತಾ ಪರಿಷತ್ ನ ಸಮಾಜಿಕ ಕಾರ್ಯದ ಅಂಗವಾಗಿ ವಕೀಲರ ದಿನಾಚರಣೆಯ ಪ್ರಯುಕ್ತ ಪರಂಗಿಪೇಟೆ
ಅರ್ಕುಳದ ಮಾತಾ ಲಕ್ಷಣಿ ಶಾಂತಿಧಾಮ ಆಶ್ರಮಕ್ಕೆ 32,000/ ಮೌಲ್ಯದ ಫ್ರಿಜ್ ನ್ನು ಆಶ್ರಮದ ಸ್ಥಾಪಕರಾದ ಹರೀಶ್ ಪೆರ್ಗಡೆ ಅವರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಎಂ. ಕೆ. ವಿಜಯ್ ಕುಮಾರ್ ಅವರನ್ನು ವಕೀಲರ ಸಂಘ (ರಿ) ಬಂಟ್ವಾಳದ ವತಿಯಿಂದ ಸನ್ಮಾನಿಸಿ ಗೌರವಿಸಿಲಾಯಿತು. ವಕೀಲರ ಸಂಘ ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ. ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿ ಅಭ್ಯಾಗತರನ್ನು ಯುವ ವಕೀಲರು ಅದ ಸ್ವರ್ಣ ಗೌರಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಧಿವಕ್ತಾ ಪರಿಷತ್ ನ ಜಿಲ್ಲೆಯ ಸದಸ್ಯರಾದ ವೀರೇಂದ್ರ ಎಂ. ಸಿದ್ದಕಟ್ಟೆ ಧನ್ಯವಾದ ಸಲ್ಲಿಸಿದರು. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು