6:24 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಪೂರ್ವಜರ ಕಾಲದಿಂದಲೂ ಹರಕು ಬಟ್ಟೆ.. ಮುರುಕು ರೊಟ್ಟಿ..!: ಶತಮಾನ ಕಳೆದರೂ ಬದಲಾಗದ ನಿರ್ಗತಿಕರ ಬದುಕು!

04/12/2024, 14:59

*ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 5 ಗ್ಯಾರಂಟಿ ಯೋಜನೆಗಳಿಂದಲೂ ವಂಚಿತರಾಗಿರುವ ನಿರ್ಗತಿಕರು*

*ಸಿಎಂ ಸಿದ್ದರಾಮಯ್ಯನವರ ತವರು ನಂಜನಗೂಡು ನಗರಸಭೆ ಅಧಿಕಾರಿಗಳ ನಿರ್ಲಕ್ಷತನಕ್ಕೆ ದಿನ ಬೆಳಗಾದರೆ ನಂಜುಂಡನ ಮುಡಿಗೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆ..!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ನಗರಸಭಾ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷತನದಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ನಿರ್ಗತಿಕರರಾಗಿ ಜೀವನ ಸಾಗಿಸುತ್ತಿದ್ದಾರೆ.
ಧಾರ್ಮಿಕ ಪುಣ್ಯಕ್ಷೇತ್ರ ನಂಜುಂಡೇಶ್ವರನ ಸನಿಹದಲ್ಲಿಯೇ ತಲೆಮಾರುಗಳಿಂದ ನಿರ್ಗತಿಕ ಕುಟುಂಬಗಳು ವಾಸುತ್ತಿವೆ.
ಪೂರ್ವಜರ ಕಾಲದಿಂದಲೂ ನಂಜುಂಡೇಶ್ವರನಿಗೆ ಪ್ರಿಯವಾದ ತುಳಸಿಹಾರ ತಯಾರಿಕೆಯೇ ಇವರ ಕಾಯಕ.
ಸ್ವಂತ ಸೂರಿಲ್ಲ. ದಾಖಲಾತಿ ಇದ್ದರೂ ಸರ್ಕಾರದ ಗ್ಯಾರಂಟಿ ಯೋಜನೆ ದೊರೆಯುತ್ತಿಲ್ಲ.


ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೀನಾಯ ಪರಿಸ್ಥಿತಿಯಲ್ಲಿ ಜೀವನ ದೂಡುತ್ತಿರುವ ಸುಮಾರು 6 ಕುಟುಂಬದ 30ಕ್ಕೂ ಹೆಚ್ಚು ಮಂದಿ ಇದ್ದಾರೆ.
ನಂಜನಗೂಡು ಪಟ್ಟಣದ ಹಳ್ಳದ ಕೇರಿಯ ಮುಖ್ಯರಸ್ತೆ ಬದಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿವೆ. ವಾಸವಿರುವ ನಿವೇಶನವು ಇವರದಲ್ಲ. ಪುಟ್ಟ ಶೌಚಾಲಯವೂ ಇವರಿಗಿಲ್ಲ.
ಪ್ರತಿ ಚುನಾವಣೆಗಳ ಸಂದರ್ಭದಲ್ಲಿ ಮತ ಕೇಳಲು ಬಂದು ಬೆಟ್ಟದಷ್ಟು ಭರವಸೆಗಳನ್ನು ತುಂಬುತ್ತಾರೆ ರಾಜಕಾರಣಿಗಳು .
ಇದುವರೆಗೂ ನಮಗೆ ಸೌಲಭ್ಯಗಳು ದೊರೆತಿಲ್ಲ. ನಮಗೂ ಕೇಳಿ ಕೇಳಿ ಸಾಕಾಗಿದೆ. ಯಾರೊಬ್ಬರೂ ನಮಗೆ ಸಹಾಯ ಮಾಡಿಲ್ಲ ಅಂತ ನೊಂದು ಆಕ್ರೋಶ ವ್ಯಕ್ತಪಡಿಸಿದ ನಿರ್ಗತಿಕರು.
ಇನ್ನಾದರೂ ಎಚ್ಚೆತ್ತು ಇವರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುವರೆ ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು