9:06 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪೂರ್ವಜರ ಕಾಲದಿಂದಲೂ ಹರಕು ಬಟ್ಟೆ.. ಮುರುಕು ರೊಟ್ಟಿ..!: ಶತಮಾನ ಕಳೆದರೂ ಬದಲಾಗದ ನಿರ್ಗತಿಕರ ಬದುಕು!

04/12/2024, 14:59

*ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 5 ಗ್ಯಾರಂಟಿ ಯೋಜನೆಗಳಿಂದಲೂ ವಂಚಿತರಾಗಿರುವ ನಿರ್ಗತಿಕರು*

*ಸಿಎಂ ಸಿದ್ದರಾಮಯ್ಯನವರ ತವರು ನಂಜನಗೂಡು ನಗರಸಭೆ ಅಧಿಕಾರಿಗಳ ನಿರ್ಲಕ್ಷತನಕ್ಕೆ ದಿನ ಬೆಳಗಾದರೆ ನಂಜುಂಡನ ಮುಡಿಗೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆ..!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ನಗರಸಭಾ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷತನದಿಂದಾಗಿ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ನಿರ್ಗತಿಕರರಾಗಿ ಜೀವನ ಸಾಗಿಸುತ್ತಿದ್ದಾರೆ.
ಧಾರ್ಮಿಕ ಪುಣ್ಯಕ್ಷೇತ್ರ ನಂಜುಂಡೇಶ್ವರನ ಸನಿಹದಲ್ಲಿಯೇ ತಲೆಮಾರುಗಳಿಂದ ನಿರ್ಗತಿಕ ಕುಟುಂಬಗಳು ವಾಸುತ್ತಿವೆ.
ಪೂರ್ವಜರ ಕಾಲದಿಂದಲೂ ನಂಜುಂಡೇಶ್ವರನಿಗೆ ಪ್ರಿಯವಾದ ತುಳಸಿಹಾರ ತಯಾರಿಕೆಯೇ ಇವರ ಕಾಯಕ.
ಸ್ವಂತ ಸೂರಿಲ್ಲ. ದಾಖಲಾತಿ ಇದ್ದರೂ ಸರ್ಕಾರದ ಗ್ಯಾರಂಟಿ ಯೋಜನೆ ದೊರೆಯುತ್ತಿಲ್ಲ.


ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೀನಾಯ ಪರಿಸ್ಥಿತಿಯಲ್ಲಿ ಜೀವನ ದೂಡುತ್ತಿರುವ ಸುಮಾರು 6 ಕುಟುಂಬದ 30ಕ್ಕೂ ಹೆಚ್ಚು ಮಂದಿ ಇದ್ದಾರೆ.
ನಂಜನಗೂಡು ಪಟ್ಟಣದ ಹಳ್ಳದ ಕೇರಿಯ ಮುಖ್ಯರಸ್ತೆ ಬದಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿವೆ. ವಾಸವಿರುವ ನಿವೇಶನವು ಇವರದಲ್ಲ. ಪುಟ್ಟ ಶೌಚಾಲಯವೂ ಇವರಿಗಿಲ್ಲ.
ಪ್ರತಿ ಚುನಾವಣೆಗಳ ಸಂದರ್ಭದಲ್ಲಿ ಮತ ಕೇಳಲು ಬಂದು ಬೆಟ್ಟದಷ್ಟು ಭರವಸೆಗಳನ್ನು ತುಂಬುತ್ತಾರೆ ರಾಜಕಾರಣಿಗಳು .
ಇದುವರೆಗೂ ನಮಗೆ ಸೌಲಭ್ಯಗಳು ದೊರೆತಿಲ್ಲ. ನಮಗೂ ಕೇಳಿ ಕೇಳಿ ಸಾಕಾಗಿದೆ. ಯಾರೊಬ್ಬರೂ ನಮಗೆ ಸಹಾಯ ಮಾಡಿಲ್ಲ ಅಂತ ನೊಂದು ಆಕ್ರೋಶ ವ್ಯಕ್ತಪಡಿಸಿದ ನಿರ್ಗತಿಕರು.
ಇನ್ನಾದರೂ ಎಚ್ಚೆತ್ತು ಇವರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುವರೆ ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು