5:58 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೆಳಗಾವಿ: ಮಗಳ ಮದುವೆ ಮಾಡಿ ಕೊಡದ ಆಕ್ರೋಶ; ಯುವಕನಿಂದ ತಾಯಿ- ಮಗನ ಭೀಕರ ಹತ್ಯೆ

05/12/2024, 22:13

ಸಂತೋಷ್ ಬೆಳಗಾವಿ

info.reporterkarnataka@gmail.com

ಮಗಳನ್ನು ಮದುವೆ ಮಾಡಿಕೊಟ್ಟಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಮನೆಗೆ ನುಗ್ಗಿ ಯುವತಿಯ ತಾಯಿ ಮತ್ತು ಸಹೋದರನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಅಕ್ಕೋಳ ಗ್ರಾಮದ ಮಂಗಳಾ ನಾಯಿಕ (42) ಹಾಗೂ ಪ್ರಜ್ವಲ ನಾಯಿಕ (18) ಕೊಲೆಯಾದ‌ ತಾಯಿ, ಮಗ ಎಂದು ಗುರುತಿಸಲಾಗಿದೆ.
ಆರೋಪಿ ರವಿ ಎಂಬಾತ ತಾಯಿ- ಮಗನ ತಲೆಗೆ
ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ. ನಂತರ ಘಟನೆ ಮಾಹಿತಿ ಪಡೆದ ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಆರೋಪಿ ರವಿಯನ್ನು ವಶಕ್ಕೆ ಪಡೆದಿದ್ದಾರೆ.
*ತಾಯಿ ವಿರೋಧ:*
ಮಗಳನ್ನು ಮದುವೆ ಮಾಡಿಕೊಡುವಂತೆ ಮಂಗಳಾ ನಾಯಿಕ ಅವರನ್ನು ಆರೋಪಿ ರವಿ ಆಗಾಗ ಪೀಡಿಸುತ್ತಿದ್ದ. ಆದರೆ, ಮಗಳನ್ನು ಮದುವೆ ಮಾಡಿ ಕೊಡಲು ಮಂಗಳಾ ಅವರು ಒಪ್ಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರವಿಯು ಈ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಬಚಾವಾದ ಮಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು