6:21 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ?: ಸುನೀಲ್ ಕುಮಾರ್ ಬಜಾಲ್ ಪ್ರಶ್ನೆ

05/12/2024, 22:16

ಮಂಗಳೂರು(reporterkarnataka.com):ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಎಂ ಉಳ್ಳಾಲ ತಾಲೂಕು ಸಮಿತಿ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಅವರು ಸ್ಪೀಕರ್ ನಡೆಯನ್ನು ಪ್ರಶ್ನಿಸಿದ್ದಾರೆ.
ಅವರು ಇಂದು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಟ್ಕಾ,, ಜುಗಾರಿ, ಸ್ಕಿಲ್ ಗೇಮ್, ಮಸಾಜ್ ಪಾರ್ಲರ್ ನಂತಹ ಅಕ್ರಮ ಚಟುವಟಿಕೆಗಳು ಮಂಗಳೂರು ನಗರಾದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದರೂ ಅದರ ವಿರುದ್ದ ಚಕಾರ ಶಬ್ದವೆತ್ತದ ಕಮಿಷನರ್ ಜನಪರ ಹೋರಾಟಗಳನ್ನೇ ಹತ್ತಿಕ್ಕಲು ಮುಂದಾಗಿರುವುದು ಪೋಲಿಸ್ ರಾಜ್ಯವನ್ನು ನಿರ್ಮಿಸಲು ಹೊರಟಂತಿದೆ ಎಂದು
ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ,
ಯುವಜನರು ಗಾಂಜಾ ಅಫೀಮಿಗೆ ಬಲಿಯಾಗಿ ಅಕ್ರಮಕೂಟಗಳ ಕಾಲಾಳುಗಳಾಗಿ ದುಡಿದು ಮನೆ ಸೇರದ ಕೊರಗಿಗೆ ಅವರ ಹೆತ್ತ ಕರುಳು ನೆಮ್ಮದಿಯಿಂದ ಮಲಗುವ ದಿನಗಳನ್ನು ಮರೆತಿದ್ದಾರೆ. ಸಭಾಪತಿಗಳು ತಮ್ಮ ಜವಾಬ್ದಾರಿ ಮರೆತ ಕಾರಣ ಉಳ್ಳಾಲದ ಜನ ಮೂಲಭೂತ ಸೌಕರ್ಯಗಳಿಲ್ಲದೆ ಮಲಗಲಾಗದ ಸ್ಥಿತಿ ಎದುರಿಸುತ್ತಿದ್ದಾರೆ. ಕೂಡಲೇ ಕಮೀಷನರ್ ಅಗ್ರವಾಲ್ ಅವರನ್ನು ವರ್ಗಾಹಿಸಲು ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೊಟ್ಟು, ಹಿರಿಯ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ, ವಿಲಾಸಿನಿ ತೊಕ್ಕೊಟ್ಟು, ಪ್ರಮೋದಿನಿ, ರಮೇಶ್ ಉಳ್ಳಾಲ, ಶೇಕರ್ ಕುಂದರ್, ರಫೀಕ್ ಹರೇಕಳ,ಜನಾರ್ಧನ ಕುತ್ತಾರ್,ಚಂದ್ರಹಾಸ ಪಿಲಾರ್,ರೋಹಿದಾಸ್, ಪದ್ಮನಾಭ ಕುಂಪಲ, ಡಿವೈಎಫ್ಐ ಮುಖಂಡರುಗಳಾದ ಅಸ್ಫಕ್ ಅಲೇಕಳ, ರಝಾಕ್ ಮುಡಿಪು, ರಝಾಕ್ ಮೊಂಟೆಪದವು, ಅಶ್ರಫ್ ಹರೇಕಳ, ಅಮೀರ್ ಉಳ್ಳಾಲಬೈಲ್, ನವೀಝ್, ದಿವ್ಯರಾಜ್ ಕುತ್ತಾರ್ , ಸುನೀಲ್ ತೇವುಲ, ಇಕ್ಭಾಲ್ ಹರೇಕಳ, ಸರ್ಫರಾಝ್ ಗಂಡಿ ಮುಂತಾದವರು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷರಾದ ನಿತಿನ್ ಕುತ್ತಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ರಿಝ್ವಾನ್ ಹರೇಕಳ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು