4:17 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಸ್ಕೌಟ್ಸ್-ಗೈಡ್ಸ್, ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ

05/12/2024, 23:04

ಮಂಗಳೂರು(reporterkarnataka.com):ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ಶಿಬಿರ ಆಯೋಜಿಸಿದೆ.
ದಿನವೊಂದಕ್ಕೆ ಆರು ವಿವಿಧ ಚಟುವಟಿಕೆಗಳ ಮೂಲಕ ಈ ಶಿಬಿರವು ೫ ದಿನಗಳ ಕಾಲ ನಡೆಯಲಿದ್ದು ಶಿಬಿರಾರ್ಥಿಗಳಿಗೆ ದೇಶಪ್ರೇಮ-ದೇಶಿಯತೆ, ದೇಶೀಯ ಕಲೆಗಳ ಅನಾವರಣ, ಪರಿಸರ ಪ್ರಜ್ಞೆ, ಸಾಹಸ ಕ್ರೀಡೆಗಳು, ಸೌಹಾರ್ದತೆ ಸಾಮರಸ್ಯ ಬದುಕಿನ ತಿಳುವಳಿಕೆ, ಸೌಂದರ್ಯ ಪ್ರಜ್ಞೆ, ಕೃಷಿಯ ಬದುಕು, ಕರಕುಶಲಗಳ ತಿಳುವಳಿಕೆ, ದೇಶೀಯ ಆಹಾರ ಪದಾರ್ಥಗಳ ಪರಿಚಯ, ಶಿಸ್ತು, ಸಮಯಪ್ರಜ್ಞೆ, ಸ್ವಚ್ಛತೆಯ ಪ್ರಾತ್ಯಕ್ಷಿಕೆಗಳ ಕಲಿಕೆ, ಮನೋರಂಜನೆಗಳು, ಯೋಗ, ಪ್ರಾಣಾಯಾಮ ತರಬೇತಿಗಳು, ಸೇವಾ ಮನೋಭಾವನೆ ಮೊದಲಾದ ವಿಚಾರಗಳಲ್ಲಿ ಅರ್ಥಪೂರ್ಣ ತರಬೇತಿ ನೀಡಲಾಗುವುದು.
ಭಾಗವಹಿಸುವ ಶಿಬಿರಾರ್ಥಿಗಳು ದಿನಾಂಕ ೦೯.೧೨.೨೦೨೪ರಂದು ಸಂಜೆ ೫.೦೦ ಗಂಟೆಯ ಒಳಗಾಗಿ ಸ್ಕೌಟ್ಸ್ಸ್-ಗೈಡ್ಸ್ ಕನ್ನಡ ಭವನ, ಸ್ವರಾಜ್ಯ ಮೈದಾನ, ಮೂಡುಬಿದಿರೆ ಇಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು