1:02 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಸ್ಕೌಟ್ಸ್-ಗೈಡ್ಸ್, ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ

05/12/2024, 23:04

ಮಂಗಳೂರು(reporterkarnataka.com):ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ಶಿಬಿರ ಆಯೋಜಿಸಿದೆ.
ದಿನವೊಂದಕ್ಕೆ ಆರು ವಿವಿಧ ಚಟುವಟಿಕೆಗಳ ಮೂಲಕ ಈ ಶಿಬಿರವು ೫ ದಿನಗಳ ಕಾಲ ನಡೆಯಲಿದ್ದು ಶಿಬಿರಾರ್ಥಿಗಳಿಗೆ ದೇಶಪ್ರೇಮ-ದೇಶಿಯತೆ, ದೇಶೀಯ ಕಲೆಗಳ ಅನಾವರಣ, ಪರಿಸರ ಪ್ರಜ್ಞೆ, ಸಾಹಸ ಕ್ರೀಡೆಗಳು, ಸೌಹಾರ್ದತೆ ಸಾಮರಸ್ಯ ಬದುಕಿನ ತಿಳುವಳಿಕೆ, ಸೌಂದರ್ಯ ಪ್ರಜ್ಞೆ, ಕೃಷಿಯ ಬದುಕು, ಕರಕುಶಲಗಳ ತಿಳುವಳಿಕೆ, ದೇಶೀಯ ಆಹಾರ ಪದಾರ್ಥಗಳ ಪರಿಚಯ, ಶಿಸ್ತು, ಸಮಯಪ್ರಜ್ಞೆ, ಸ್ವಚ್ಛತೆಯ ಪ್ರಾತ್ಯಕ್ಷಿಕೆಗಳ ಕಲಿಕೆ, ಮನೋರಂಜನೆಗಳು, ಯೋಗ, ಪ್ರಾಣಾಯಾಮ ತರಬೇತಿಗಳು, ಸೇವಾ ಮನೋಭಾವನೆ ಮೊದಲಾದ ವಿಚಾರಗಳಲ್ಲಿ ಅರ್ಥಪೂರ್ಣ ತರಬೇತಿ ನೀಡಲಾಗುವುದು.
ಭಾಗವಹಿಸುವ ಶಿಬಿರಾರ್ಥಿಗಳು ದಿನಾಂಕ ೦೯.೧೨.೨೦೨೪ರಂದು ಸಂಜೆ ೫.೦೦ ಗಂಟೆಯ ಒಳಗಾಗಿ ಸ್ಕೌಟ್ಸ್ಸ್-ಗೈಡ್ಸ್ ಕನ್ನಡ ಭವನ, ಸ್ವರಾಜ್ಯ ಮೈದಾನ, ಮೂಡುಬಿದಿರೆ ಇಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು