8:37 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ

06/12/2024, 00:25

ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ
ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ ನೀಡಲಾಯಿತು.
ಈ ಮೊದಲು ಕೂಡ ನಮ್ಮ ಫೌಂಡೇಶನ್ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಶ್ರೀಯುತ ರಿಗೆ ಸಹಕಾರ ನೀಡಿದೆ.ಅಷ್ಟೇ ಅಲ್ಲದೆ ಕಳೆದ 6 ವರ್ಷಗಳಿಂದ ಪ್ರತಿ ತಿಂಗಳು 1000 ಚಿಕಿತ್ಸಾ ವೆಚ್ಚಕ್ಕಾಗಿ ಯಕ್ಷಧ್ರುವ ಫೌಂಡೇಶನ್ ನೀಡುತ್ತಿದೆ.
ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ್ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ , ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯರಾದ ವಿಜಯ್ ಕುಮಾರ್ ಮೊಯ್ಲೊಟ್ಟು ಉಪಸ್ಥಿತರಿದ್ದರು.
*ಈ ಕಲಾವಿದರು ಕಳೆದ 18 ವರ್ಷಗಳಿಂದ ತೀರಾ ಅನಾರೋಗ್ಯ ದಿಂದ ಇದ್ದಾರೆ. ತಾಯಿ ಕೂಡ ತುಂಬಾ ಪ್ರಾಯದವರಗಿದ್ದು, ಮನೆಯಲ್ಲಿ ಊಟಕ್ಕೂ ಮದ್ದಿಗೂ ಪರದಾಡುವ ಸ್ಥಿತಿ,ಬೇರೆ ಯಾರೂ ಕುಟುಂಬಸ್ಥರು ಇವರಿಗೆ ಇಲ್ಲ.ಇವರು ಕಲಾ ವಲಯಕ್ಕೆ ನೀಡಿದ ಕೊಡುಗೆ ಅಪಾರ.ಇಂತಹ ವಿದ್ವಾಂಸರ ಸ್ಥಿತಿ, ಅವರ ತಾಯಿಯ ಸ್ಥಿತಿ ಚಿಂತಾಜನಕ.*
ತೀರಾ ಸಂಕಷ್ಟದಲ್ಲಿರುವ *ಗಣೇಶ್ ಪೂಜಾರಿ ಕೊಲೆಕಾಡಿ* ಕಲಾವಿದನ ಕಷ್ಟಕ್ಕೆ ನಾವೆಲ್ಲರೂ ಕೈಜೋಡಿಸೋಣ.
ಅವರ ಫೋನ್ ಪೇ ಅಥವಾ ಗೂಗಲ್ ಪೇ ನಂಬರ್
9482130381

ಇತ್ತೀಚಿನ ಸುದ್ದಿ

ಜಾಹೀರಾತು