6:13 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ

06/12/2024, 00:25

ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ
ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ ನೀಡಲಾಯಿತು.
ಈ ಮೊದಲು ಕೂಡ ನಮ್ಮ ಫೌಂಡೇಶನ್ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಶ್ರೀಯುತ ರಿಗೆ ಸಹಕಾರ ನೀಡಿದೆ.ಅಷ್ಟೇ ಅಲ್ಲದೆ ಕಳೆದ 6 ವರ್ಷಗಳಿಂದ ಪ್ರತಿ ತಿಂಗಳು 1000 ಚಿಕಿತ್ಸಾ ವೆಚ್ಚಕ್ಕಾಗಿ ಯಕ್ಷಧ್ರುವ ಫೌಂಡೇಶನ್ ನೀಡುತ್ತಿದೆ.
ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ್ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ , ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯರಾದ ವಿಜಯ್ ಕುಮಾರ್ ಮೊಯ್ಲೊಟ್ಟು ಉಪಸ್ಥಿತರಿದ್ದರು.
*ಈ ಕಲಾವಿದರು ಕಳೆದ 18 ವರ್ಷಗಳಿಂದ ತೀರಾ ಅನಾರೋಗ್ಯ ದಿಂದ ಇದ್ದಾರೆ. ತಾಯಿ ಕೂಡ ತುಂಬಾ ಪ್ರಾಯದವರಗಿದ್ದು, ಮನೆಯಲ್ಲಿ ಊಟಕ್ಕೂ ಮದ್ದಿಗೂ ಪರದಾಡುವ ಸ್ಥಿತಿ,ಬೇರೆ ಯಾರೂ ಕುಟುಂಬಸ್ಥರು ಇವರಿಗೆ ಇಲ್ಲ.ಇವರು ಕಲಾ ವಲಯಕ್ಕೆ ನೀಡಿದ ಕೊಡುಗೆ ಅಪಾರ.ಇಂತಹ ವಿದ್ವಾಂಸರ ಸ್ಥಿತಿ, ಅವರ ತಾಯಿಯ ಸ್ಥಿತಿ ಚಿಂತಾಜನಕ.*
ತೀರಾ ಸಂಕಷ್ಟದಲ್ಲಿರುವ *ಗಣೇಶ್ ಪೂಜಾರಿ ಕೊಲೆಕಾಡಿ* ಕಲಾವಿದನ ಕಷ್ಟಕ್ಕೆ ನಾವೆಲ್ಲರೂ ಕೈಜೋಡಿಸೋಣ.
ಅವರ ಫೋನ್ ಪೇ ಅಥವಾ ಗೂಗಲ್ ಪೇ ನಂಬರ್
9482130381

ಇತ್ತೀಚಿನ ಸುದ್ದಿ

ಜಾಹೀರಾತು