5:30 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನಸಾಮಾನ್ಯರಿಗೆ ತೆರಿಗೆ, ಬೆಲೆ ಏರಿಕೆಯ ಬರೆ: ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ

06/12/2024, 01:23

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಕಳೆದ ಐದಾರು ತಿಂಗಳಿನಿಂದ
ಪರಿಸರ ಸಹ್ಯ ಸಿಎನ್‌ಜಿ ದರ ಬರೋಬ್ಬರಿ ಕೆ.ಜಿಗೆ 4.50 ದರ ಏರಿಸಿದರೆ, ಇದೀಗ ಜನಸಾಮಾನ್ಯರು ಬಳಸುವ ವಿದ್ಯುತ್ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಕಾಂಗ್ರೆಸ್ ಆಡಳಿತದ ಸರಕಾರ ಬೆಲೆ ಏರಿಕೆಯ ಶಾಕ್ ನೀಡುತ್ತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಆರ್ಥಿಕ ಇಕ್ಕಟ್ಟಿನಲ್ಲಿ ಸಿಲುಕಿ ಚಡಪಡಿಸುತ್ತಿದೆ. ಅರ್ಥಿಕ ಕ್ರೋಢಿಕರಣಕ್ಕೆ ಜನರಿಗೆ ತಿಳಿಯದಂತೆ ದಿನಸಿ ವಸ್ತುಗಳ ಮೇಲೆ ತೆರಿಗೆ ಹೊರ ಹಾಕಿದರೆ, ಇದೀಗ ವಿದ್ಯುತ್ ಕ್ಷೇತ್ರಕ್ಕೆ ಕೈ ಹಾಕಿದೆ.ದರ ಏರಿಕೆಯಾದಲ್ಲಿ ಪ್ರತೀಯೊಂದು ವಸ್ತುವಿಗೂ ಮತ್ತೆ ಏರಿಕೆ ಆಗುವುದರಲ್ಲಿ ಸಂಶಯವಿಲ್ಲ.
ಜನರ ಮೇಲೆ ತೆರಿಗೆ, ಬೆಲೆ ಏರಿಕೆ ಮಾಡಿದರೂ ಯಾವುದೇ ಶಾಸಕನಿಗೂ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಮಾತ್ರ ನೀಡುತ್ತಿಲ್ಲ. ಮತದಾರರಿಗೆ ಶಾಸಕರು ಮುಖ ತೋರಿಸದಂತಹ ಸ್ಥಿತಿಯನ್ನು ಸರಕಾರ ತಂದೊಡ್ಡಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ 2 ಸಾವಿರ ಕೋಟಿ ರೂ. ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ಈ ಬಾರಿ ಕನಿಷ್ಠ 1 ಕೋಟಿ ರೂ. ಬಿಡುಗಡೆಯಾಗಲೂ ಹೆಣಗಾಡುತ್ತಿದ್ದೇವೆ, ಹಾಗಾದರೆ ಬೆಲೆ ಎರಿಕೆಯಿಂದ ಬಂದ ಆದಾಯದ ಮೂಲ ಎಲ್ಲಿಗೆ ಸೋರಿಕೆಯಾಗುತ್ತಿದೆ ಎಂಬುದನ್ನು ಸರಕಾರ ಶ್ವೇತಪತ್ರದ ಹೊರಡಿಸಿ ಜನತೆಗೆ ಮಾಹಿತಿ ನೀಡಬೇಕು ಎಂದು ಶಾಸಕ ಡಾ.ಭರತ್‌ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು