6:54 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

06/12/2024, 12:47

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ಗೆ ಒಳಗಾಗಿದ್ದ
ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೂಡ್ಲಿಗಿಯ ಸುಮಯಾ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಇದರಿಂದ ಬಾಣಂತಿಯರ ಸರಣಿ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಸುಮಯಾ ಅವರು ನವೆಂಬರ್ 11ರಂದು ಹೆರಿಗೆಗೆಂದು ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರಿಗೆ ಸಿಸೇರಿಯನ್‌ ಮಾಡಲಾಗಿತ್ತು. ಆ ಬಳಿಕ ತೀವ್ರ ಅಸ್ವಸ್ಥಗೊಂಡ ಅವರನ್ನು ಮರುದಿನ ಬಳ್ಳಾರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್‌) ದಾಖಲಿಸಲಾಗಿತ್ತು.
ಬಹು ಅಂಗಾಂಗ ವೈಫಲ್ಯದ ಸಮಸ್ಯೆಗೆ ತುತ್ತಾಗಿದ್ದ ಅವರನ್ನು 24 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತಿತ್ತು. ಬಹುತೇಕ ಚೇತರಿಸಿಕೊಂಡಿದ್ದರೂ ಕಿಡ್ನಿ ಸಮಸ್ಯೆ ಪರಿಹಾರ ಆಗಿರಲಿಲ್ಲ. ಬೆಂಗಳೂರಿಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಬೇಕು ಎಂದು ವಿಮ್ಸ್‌ ವೈದ್ಯರ ತಂಡ ನಿರ್ಧರಿಸಿತ್ತು. ಆದರೆ ಗುರುವಾರ ರಾತ್ರಿ 8ರ ಸುಮಾರಿನಲ್ಲಿ ಏಕಾಏಕಿ ರಕ್ತದೊತ್ತಡ ಕುಸಿದು ಅವರ ಆರೋಗ್ಯ ಏರುಪೇರಾಯಿತು ಎನ್ನಲಾಗಿದೆ. ಜೀವ ರಕ್ಷಕ ನೀಡಿ, ಪಿಸಿಆರ್‌ ಮಾಡಿದ ಹೊರತಾಗಿಯೂ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವಿಮ್ಸ್‌ ನಿರ್ದೇಶಕ ಗಂಗಾಧರ ಗೌಡ ತಿಳಿಸಿದರು.
*ಶಿಶು ಸಾವು:* ವಿಮ್ಸ್‌ನಲ್ಲಿ ಗುರುವಾರ ನವಜಾತ ಶಿಶುವೊಂದು ಮೃತಪಟ್ಟಿದೆ. ‌ಬಾಣಂತಿ ಗಂಗೋತ್ರಿ ಕುಟುಂಬಸ್ಥರು, ‘ಇದು ವೈದ್ಯರ ನಿರ್ಲಕ್ಷ್ಯ’ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ನಿರಾಕರಿಸಿರುವ ವಿಮ್ಸ್‌, ‘ಮಗು ಹೊಟ್ಟೆಯಲ್ಲಿರುವಾಗಲೇ ಉಸಿರಾಟದ ಸಮಸ್ಯೆಯಾಗಿತ್ತು’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು