8:29 PM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಹೆಣ ಊಳುವ ವಿಚಾರ: ಕಾಫಿನಾಡಲ್ಲಿ ಎರಡು ಜಾತಿಗಳ ಮಧ್ಯ ವಾರ್; ಶವ ಊಳುವ ಗುಂಡಿಗೆ ಇಳಿದು ಗ್ರಾಪಂ ಮಾಜಿ ಅಧ್ಯಕ್ಷೆ ಪ್ರತಿಭಟನೆ

06/12/2024, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಣ ಊಳುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಜಾತಿಗಳ ಮಧ್ಯ ಗಲಾಟೆ ನಡೆದಿದ್ದು, ಶವ ಊಳುವ ಗುಂಡಿಗೆ ಇಳಿದು
ಮಹಿಳೆಯೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಊಳುಲು ಹೋದ ಒಂದು ನಿರ್ದಿಷ್ಟ ಜಾತಿಗೆ ಇನ್ನೊಂದು ಜಾತಿ ಸಮುದಾಯದಿಂದ ತೀವ್ರ‌ ವಿರೋಧ ವ್ಯಕ್ತವಾಯಿತು.


ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಹೆಣ ಊಳುವುದನ್ನು ವಿರೋಧಿಸಿತು.ಗುಂಡಿಗೆ ಇಳಿದು ಶವ ಊಳಲು ಒಂದು ಸಮುದಾಯದ ಮಹಿಳೆ ವಿರೋಧ ವ್ಯಕ್ತಪಡಿಸಿದರು. ಇವರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ. ಮಾಜಿ ಅಧ್ಯಕ್ಷತೆಯ ಜತೆ ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಂತರ ಆಲ್ದೂರು
ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು