ಇತ್ತೀಚಿನ ಸುದ್ದಿ
ಬಾಣಂತಿಯರ ಸಾವು: ಬಳ್ಳಾರಿ ಜಿಲ್ಲಾಸ್ಪತ್ರೆ ವಿಮ್ಸ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ
07/12/2024, 15:54

ಗಣೇಶ್ ಇನಾಂದಾರ ಬಳ್ಳಾರಿ
info.reporterkarnataka@gmal.com
ಬಾಣಂತಿಯರ ಸರಣಿ ಸಾವಿನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ಗೆ ಶನಿವಾರ ದಿಢೀರ್ ಭೇಟಿ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಆರಂಭಿಸಿದ್ದಾರೆ.
ಲೋಕಾಯುಕ್ತ ಬಳ್ಳಾರಿ ಜಿಲ್ಲಾ ಎಸ್ಪಿ ಸಿದ್ದರಾಜು ನೇತೃತ್ವದ 25ಕ್ಕೂ ಹೆಚ್ಚಿನ ಸಿಬ್ಬಂದಿಯ ತಂಡ ಎರಡು ಭಾಗಗಳಾಗಿ ಜಿಲ್ಲಾಸ್ಪತ್ರೆ, ವಿಮ್ಸ್ಗೆ ತೆರಳಿವೆ.
ಬಳ್ಳಾರಿಯಲ್ಲಿ ಆಗಿರುವ ಬಾಣಂತಿಯರ ಸರಣಿ ಸಾವು ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಅದರ ಭಾಗವಾಗಿ ಇಂದು ಪರಿಶೀಲನೆ ನಡೆಯುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಪರಿಶೀಲನೆಯಲ್ಲಿ ಹೊಸಪೇಟೆ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿಯೂ ಇದ್ದಾರೆ. ಆಸ್ಪತ್ರೆಗಳ ಹೆರಿಗೆ, ಐಸಿಯು, ಔಷಧ ಉಗ್ರಾಣಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ.