6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಅನೈತಿಕ ಸಂಬಂಧ; ವಾಟ್ಸಾಪ್ ಗೆಳೆಯನಿಂದ 25ರ ಹರೆಯದ ಗೃಹಿಣಿಯ ಭೀಕರ ಹತ್ಯೆ

07/12/2024, 19:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ 25ರ ಹರೆಯದ ಗೃಹಿಣಿಯನ್ನು ವಾಟ್ಸಾಪ್ ಸ್ನೇಹಿತ ಬರ್ಬರವಾಗಿ ಹತ್ಯೆಗೈದ ಘಟನೆ ಬಾಳೆಹೊನ್ನೂರು ಸಮೀಪದ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿದೆ.


ಕಿಚ್ಚಬ್ಬಿ ಗ್ರಾಮದ ತೃಪ್ತಿ (25) ಎಂಬಾಕೆ ಮೃತ ದುರ್ದೈವಿ.
ವಾಟ್ಸಾಪ್ ಸ್ನೇಹಿತ ಚಿರಂಜೀವಿ ಚಾಕುವಿನಲ್ಲಿ ಚುಚ್ಚಿ ಸಾಯಲಿಲ್ಲ ಎಂದು ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ.
ವಾಟ್ಸಾಪ್ ನಲ್ಲಿ ತೃಪ್ತಿಗೆ ಸ್ನೇಹಿತನಾಗಿದ್ದ ಆರೋಪಿ ಚಿರಂಜೀವಿ ಜೊತೆ ಮೃತ ತೃಪ್ತಿ ಹೋಗಿದ್ದಳು.
ಬಾಳೆಹೊನ್ನೂರು ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಟ್ ದಾಖಲಾಗಿತ್ತು.
ವಾಪಸ್ ಬಂದ ಬಳಿಕ ಮನೆಯವರ ರಾಜಿ ಬಳಿಕ ಆತನ ಜೊತೆ ಮಾತು-ಸ್ನೇಹವನ್ನು ತೃಪ್ತಿ ಬಿಟ್ಟಿದ್ದಳು. ಇಂದು ಏಕಾಏಕಿ ಮನೆಗೆ ಬಂದು ಆತ ಮಕ್ಕಳ ಎದುರೇ ಚುಚ್ಚಿ ಕೊಲೆಗೆ ಯತ್ನಿಸಿದ್ದ. ಚಾಕುವಿನಿಂದ ಚುಚ್ಚಿ ಸಾಯಲಿಲ್ಲ ಎಂದು ಮನೆ ಹಿಂದಿನ ಕೆರೆಗೆ ಎಸೆದಿದ್ದಾನೆ. ತೃಪ್ತಿ ಪತಿ ಕೆಲಸಕ್ಕೆ ಹೋಗಿದ್ದಾಗ ನಡೆದಿರುವಾಗ ಈ ದುಷ್ಕೃತ್ಯ ನಡೆದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು