ಇತ್ತೀಚಿನ ಸುದ್ದಿ
ತೀರ್ಥಹಳ್ಳಿ: ದನ ಅಡ್ಡ ಬಂದು ಬೈಕ್ ನಿಂದ ಬಿದ್ದ ಸವಾರನಿಗೆ ಗಾಯ
07/12/2024, 19:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿಯ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ನರ್ಸರಿ ಎದುರು ರಸ್ತೆಯಲ್ಲಿ ದನವೊಂದು ಏಕಾಏಕಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಬಿದ್ದು ಗಾಯಗೊಂಡ ಘಟನೆ ನಡೆದಿದೆ.
ಶನಿವಾರ ಮಧ್ಯಾಹ್ನ ತಳುವೆಯ ನರ್ಸರಿ ಬಳಿ ಈ ಅಪಘಾತವಾಗಿದ್ದು ಬೈಕ್ ಸವಾರನ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳು ಭೀಮನಕಟ್ಟೆಯ ನಿವಾಸಿ ಎಂದು ತಿಳಿದು ಬಂದಿದ್ದು ಆತ ಕೊನೆ ಕೆಲಸ ಮಾಡುತ್ತಿದ್ದರು. ಇಂದು ಅಡಿಕೆ ತೋಟವೊಂದರಲ್ಲಿ ಅಡಿಕೆ ಕೊನೆ ತೆಗೆದು ವಾಪಾಸ್ ತೀರ್ಥಹಳ್ಳಿಗೆ ಬರುವ ವೇಳೆ ತಳುವೆ ಸಮೀಪ ಈ ಅವಘಡ ಸಂಭವಿಸಿದೆ.
ಬೈಕ್ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಆತನನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.