11:32 PM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾದ ಕಳಪೆ ಶೌಚಾಲಯ: ಸಿಡಿದೆದ್ದ ಶಾಸಕರಿಂದ ಅಧಿಕಾರಿಗಳ ತರಾಟೆ

07/12/2024, 20:55

*ಏನ್ರೀ ಇದು.. ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ...!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೈ ಮತ್ತು ಕಾಲಿನಲ್ಲಿ ಟಚ್ ಮಾಡಿದ್ರೆ ಸಾಕು ಪೈಪ್ ಗಳು ಕಿತ್ತು ಬರುತ್ತಿವೆ. ಏನ್ರೀ ಇದು ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಶಾಸಕ ದರ್ಶನ್ ಧ್ರುವನಾರಾಯಣ್ ಗುಡುಗಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಮಾಡಲಾಗಿದ್ದ, ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ 4 ಕೊಠಡಿಗಳು ಮತ್ತು 3 ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಲು ಬಂದ ಶಾಸಕ ದರ್ಶನ್ ಧ್ರುವನಾರಾಯಣ್ ಶೌಚಾಲಯದ ಕಳಪೆ ಕಾಮಗಾರಿಯನ್ನು ನೋಡಿ ಶಾಕ್ ಆಗಿದ್ದಾರೆ. ಟೇಪ್ ಕತ್ತರಿಸಿ ಉದ್ಘಾಟನೆ ಮಾಡಿದ ಬಳಿಕ ಪರಿಶೀಲನೆ ನಡೆಸಿದ ಅವರು ಶೌಚಾಲಯಕ್ಕೆ ಅಳವಡಿಸಿರುವ ವಸ್ತುಗಳು ಕ್ವಾಲಿಟಿ ಇಲ್ಲ, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ. ಸರಿಯಾಗಿ ಕೆಲಸ ಮಾಡದೆ ಎಲ್ಲರೂ ಆಟ ಆಡ್ತಾ ಇದ್ದೀರಾ…! ಏನ್ರೀ ಇದು ಕಾಮಗಾರಿ..? ಇಂತಹ ಕಳಪೆ ಕಾಮಗಾರಿ ಉದ್ಘಾಟನೆ ಮಾಡಲು ಏಕೆ ಕರೆದಿದ್ದೀರಾ.. ಎಂದು ನಿರ್ಮಿತಿ ಕೇಂದ್ರದ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಿಗ್ಗಾ ಮಗ್ಗ ತರಾಟೆಗೆ ತೆಗೆದುಕೊಂಡರು ಈ ಕೂಡಲೇ ಗುಣಮಟ್ಟದ ವಸ್ತುಗಳನ್ನು ಅಳವಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಖಡಕ್ ಸೂಚನೆ ನೀಡಿದರು.
ಇದೇ ಸಂದರ್ಭ ನಂಜನಗೂಡು ನಗರದ ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 1.62 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿಪೂಜೆ ನೇರವೇರಿಸಿದರು.


ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಶಾಸಕ ದರ್ಶನ್ ದೃವನಾರಾಯಣ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನಾ ಬಾನು, ನಗರಸಭಾ ಪೌರಯುಕ್ತರಾದ ನಂಜುಂಡಸ್ವಾಮಿ, ನಗರಸಭಾ ಸದಸ್ಯರಾದ ಮಹೇಶ್, ನಗರಸಭಾ ಇಂಜಿನಿಯರ್ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು