4:15 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾದ ಕಳಪೆ ಶೌಚಾಲಯ: ಸಿಡಿದೆದ್ದ ಶಾಸಕರಿಂದ ಅಧಿಕಾರಿಗಳ ತರಾಟೆ

07/12/2024, 20:55

*ಏನ್ರೀ ಇದು.. ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ...!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೈ ಮತ್ತು ಕಾಲಿನಲ್ಲಿ ಟಚ್ ಮಾಡಿದ್ರೆ ಸಾಕು ಪೈಪ್ ಗಳು ಕಿತ್ತು ಬರುತ್ತಿವೆ. ಏನ್ರೀ ಇದು ಎಲ್ಲರೂ ಸೇರಿಕೊಂಡು ಆಟ ಆಡ್ತಾ ಇದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಶಾಸಕ ದರ್ಶನ್ ಧ್ರುವನಾರಾಯಣ್ ಗುಡುಗಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಮಾಡಲಾಗಿದ್ದ, ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ 4 ಕೊಠಡಿಗಳು ಮತ್ತು 3 ಶೌಚಾಲಯ ಕಟ್ಟಡವನ್ನು ಉದ್ಘಾಟನೆ ಮಾಡಲು ಬಂದ ಶಾಸಕ ದರ್ಶನ್ ಧ್ರುವನಾರಾಯಣ್ ಶೌಚಾಲಯದ ಕಳಪೆ ಕಾಮಗಾರಿಯನ್ನು ನೋಡಿ ಶಾಕ್ ಆಗಿದ್ದಾರೆ. ಟೇಪ್ ಕತ್ತರಿಸಿ ಉದ್ಘಾಟನೆ ಮಾಡಿದ ಬಳಿಕ ಪರಿಶೀಲನೆ ನಡೆಸಿದ ಅವರು ಶೌಚಾಲಯಕ್ಕೆ ಅಳವಡಿಸಿರುವ ವಸ್ತುಗಳು ಕ್ವಾಲಿಟಿ ಇಲ್ಲ, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ. ಸರಿಯಾಗಿ ಕೆಲಸ ಮಾಡದೆ ಎಲ್ಲರೂ ಆಟ ಆಡ್ತಾ ಇದ್ದೀರಾ…! ಏನ್ರೀ ಇದು ಕಾಮಗಾರಿ..? ಇಂತಹ ಕಳಪೆ ಕಾಮಗಾರಿ ಉದ್ಘಾಟನೆ ಮಾಡಲು ಏಕೆ ಕರೆದಿದ್ದೀರಾ.. ಎಂದು ನಿರ್ಮಿತಿ ಕೇಂದ್ರದ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಹಿಗ್ಗಾ ಮಗ್ಗ ತರಾಟೆಗೆ ತೆಗೆದುಕೊಂಡರು ಈ ಕೂಡಲೇ ಗುಣಮಟ್ಟದ ವಸ್ತುಗಳನ್ನು ಅಳವಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಖಡಕ್ ಸೂಚನೆ ನೀಡಿದರು.
ಇದೇ ಸಂದರ್ಭ ನಂಜನಗೂಡು ನಗರದ ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 1.62 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿಪೂಜೆ ನೇರವೇರಿಸಿದರು.


ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಶಾಸಕ ದರ್ಶನ್ ದೃವನಾರಾಯಣ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರಿಯಾನಾ ಬಾನು, ನಗರಸಭಾ ಪೌರಯುಕ್ತರಾದ ನಂಜುಂಡಸ್ವಾಮಿ, ನಗರಸಭಾ ಸದಸ್ಯರಾದ ಮಹೇಶ್, ನಗರಸಭಾ ಇಂಜಿನಿಯರ್ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು