9:42 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ನಂಜನಗೂಡು: ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ

08/12/2024, 11:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶಿಕ್ಷಣ ಹಾಗೂ ಆರೋಗ್ಯ ಇಲಾಖೆ, ತಾಲೂಕು ಪಂಚಾಯತಿ ಮತ್ತು ಅಲೀಂ ಕೋ ಸಹಯೋಗದೊಂದಿಗೆ ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಎಚ್. ಡಿ ಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು,
ತಾಲೂಕು ದಂಡಾಧಿಕಾರಿಗಳಾದ ಶ್ರೀನಿವಾಸ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ತಾಲೂಕು ಆಡಳಿತದಿಂದ ವಿಶ್ವ ವಿಕಲಚೇತನರ ದಿನದ ಶುಭಾಶಯಗಳನ್ನು ಕೋರಿ, ಸರ್ಕಾರದ ಸವಲತ್ತುಗಳು ಹಾಗೂ ಸಲಕರಣೆಗಳನ್ನು ಪಡೆಯುವ ಮೂಲಕ ಅವರನ್ನು ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವಂತೆ ಪೋಷಕರಿಗೆ ಕರೆ ನೀಡಿದರು,ಇದೇ ಸಂದರ್ಭ ತಾಲೋಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ವಿಷೇಶ ಚೇತನ ಮಕ್ಕಳಾಗಿ ಹುಟ್ಟುವುದು ಯಾವುದೇ ಶಾಪವಲ್ಲ, ಅದು ಗರ್ಭ ವ್ಯವಸ್ಥೆಯಲ್ಲಿ ಹಾಗೂ ಹೆರಿಗೆ ಸಮಯದಲ್ಲಿ ಆಗುವ ಏರುಪೇರಿನಿಂದ ಇಂತಹ ಮಕ್ಕಳು ಜನಿಸುತ್ತಾರೆ. ಇಂತಹ ಮಕ್ಕಳ ಲಾಲನೆ ಪಾಲನೆ ಮಾಡುವ ಪೋಷಕರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು,
ಈ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಜಿಲ್ಲೆಯಿಂದ ತಜ್ಞ ವೈದ್ಯರನ್ನು,ನಿಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಹಾಗಾಗಿ ಪೋಷಕರು,ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.


ಕಾರ್ಯಕ್ರಮದಲ್ಲಿ ತಾಲೋಕು ಪಂಚಾಯತಿ ಇಒ ರಘುನಂದನ್, ಮುತ್ತುರಾಜು, ಬಿಆರ್ ಸಿ ಕೃಷ್ಣಯ್ಯ, ಆರ್ ಬಿ ಎಸ್ ಕೆ ವೈದ್ಯರು ಮತ್ತು ತಂಡ, ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು