9:10 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ವಿವೇಕಾನಂದ ಶಿಶು ಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

08/12/2024, 19:59

ಪುತ್ತೂರು(reporterkarnataka.com): ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು.
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.

ಶಂಕರಿ ಶರ್ಮ ಅವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.
ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ
ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಲಕ್ಷ್ಮೀಪ್ರಭ ಸ್ವಾಗತಿಸಿ, ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯಮಾತಾಜಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು