10:42 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ರಸ್ತೆ ಅಗಲೀಕರಣ: ಸಂತ್ರಸ್ತರಿಗೆ ವೈಯಕ್ತಿಕ ಪರಿಹಾರ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ

08/12/2024, 20:05

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ 7,8ನೇ ವಾರ್ಡಿನ ಬಾಪೂಜಿ ನಗರದಲ್ಲಿ ರಸ್ತೆ ಅಗಲೀಕರಣದ ವೇಳೆ ಸಂಪೂರ್ಣ ಮನೆ ತೆರವು ಮಾಡಿಕೊಂಡ 12 ಜನ ಸಂತ್ರಸ್ತರಿಗೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ವಿತರಿಸಿದರು.
ಬಳ್ಳಾರಿಯ ಗಾಂಧಿ ನಗರದ ತಮ್ಮ ಕಚೇರಿ ವಿಜಯೀಭವದಲ್ಲಿ ಭಾನುವಾರ ಮಧ್ಯಾಹ್ನ ಚೆಕ್ ಮೂಲಕ ಪರಿಹಾರ ವಿತರಿಸಿದರು.
ಬಾಪೂಜಿ ನಗರದ ಫಲಾನುಭವಿಗಳಾದ ಲಕ್ಷ್ಮೀ, ಇಂದು, ಹುಲಿಯಮ್ಮ, ಮೀನಾಕ್ಷಿ, ರತ್ನಮ್ಮ, ಗಂಗಮ್ಮ, ಮಾರೆಮ್ಮ, ಶಿವಮ್ಮ, ಹೆಚ್.ವಂದನಾ, ಬಿ.ಗಂಗಮ್ಮ, ಸರಸ್ವತಿ, ವಿದ್ಯಾಶ್ರೀ ಅವರು ಶಾಸಕ ನಾರಾ ಭರತ್ ರೆಡ್ಡಿಯವರಿಂದ ಚೆಕ್ ಪಡೆದುಕೊಂಡರು.

ಅಂದ್ರಾಳು ಸಮೀಪ ಈಗಾಗಲೇ ಸರ್ಕಾರಿ ಜಾಗವನ್ನು ಗುರುತಿಸಲಾಗಿದ್ದು, ಅಲ್ಲಿ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮನೆ ಕಳೆದುಕೊಂಡಿರುವ 12 ಜನರಿಗೆ ಶೀಘ್ರ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.
ಈ ಸಂದರ್ಭ ಪಾಲಿಕೆಯ ಸದಸ್ಯರಾದ ರಾಮಾಂಜನೇಯ, ಕಾಂಗ್ರೆಸ್ ಮುಖಂಡರಾದ ಎ.ಮಾನಯ್ಯ, ಶಿವರಾಜ್, ಶಂಕರ್, ನಾಗೇಂದ್ರಪ್ಪ, ಉದ್ಯಮಿ ಚಂದ್ರಶೇಖರ ರೆಡ್ಡಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು