9:39 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಬಂಗ್ರಕೂಳೂರು: 55 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

08/12/2024, 20:08

ಸುರತ್ಕಲ್ (reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು ಶ್ರೀ ಕೋರ್ದಬ್ಬು ದೈವಸ್ಥಾನ ರಸ್ತೆಯನ್ನು 55 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ನಿಧಿಯಿಂದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಹಾಲಿ ಮೇಯರ್ ಮನೋಜ್ ಕುಮಾರ್ ಅವರು ಅನುದಾನ ಬಿಡುಗಡೆಗೆ ಸಹಕರಿಸಿದ್ದಾರೆ.
ಸ್ಥಳೀಯರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ. ಸ್ಥಳೀಯವಾಗಿ ಪಾಲಿಕೆಯ ನಿಧಿಯಿಂದಲೇ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.
ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಪ್ರಾಸ್ತಾವಿಸಿ, ಮಳೆಗಾಲ ಸಹಿತ ಇಲ್ಲಿನ ರಸ್ತೆ ಕೆಸರಿನಿಂದ ಕೂಡಿದ್ದು ದೈವಸ್ಥಾನ, ಬಡಾವಣೆಯಿರುವ ಸ್ಥಳವಾಗಿದೆ. ಶಾಸಕರಲ್ಲಿ ಮನವಿ ಮಾಡಿದ ಮೇರೆಗೆ ಪಾಲಿಕೆಯಲ್ಲಿ ಅನುದಾನ ಮೀಸಲಿರಿಸಿ ಇದೀಗ ಕಾಮಗಾರಿ ಆರಂಭಗೊಂಡಿದೆ ಎಂದರು.
ಮೇಯರ್ ಮನೋಜ್ ಕುಮಾರ್ ಕೋಡಿಕಲ್, ನಿಕಟಪೂರ್ವ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ಪ್ರಮುಖರಾದ ಉಮೇಶ್‍ಮಲರಾಯನ ಸಾನ, ನವನೀತ್ ಕೋಟ್ಯಾನ್,ಲತೀಶ್, ಕೋರ್ದಬ್ಬು ದೈವಸ್ಥಾನದ ಪ್ರಮುಖರು , ಗುತ್ತಿಗೆದಾರ ಕೆ.ಸಿ ,ಬಡವಾಣೆ ನಿವಾಸಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು