9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಲಕರಣೆ ವಿತರಣೆ

09/12/2024, 20:48

ಬಂಟ್ವಾಳ(reporterkarnataka.com): ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ತಮ್ಮ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಪ್ರಸ್ತುತ ಅರ್ಜಿ ಹಾಕಿರುವ ೧೨೬ ಮಂದಿಯ ಪೈಕಿ ಸರಕಾರದ ಗುರಿಯಂತೆ ೩೬ ಮಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.


ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿ ಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್, ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ, ಮುರಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು