10:46 PM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಅನುದಾನಿತ ಪ.ಪೂ. ಕಾಲೇಜುಗಳ ಬೋಧಕ-ಬೋಧಕೇತರ ಸಂಘದಿಂದ ಬಂಟ್ವಾಳ ಶಾಸಕರ ಭೇಟಿ

09/12/2024, 21:05

ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಅನುದಾನಿತ ಪ.ಪೂ.ಕಾಲೇಜುಗಳ ಬೋಧಕ-ಬೋಧಕೇತರ ಸಂಘದ ವತಿಯಿಂದ ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯಕ್ ಅವರನ್ನು ಅವರ ಒಡ್ಡೂರು ಫಾರ್ಮ್ಸ್ ನಿವಾಸದಲ್ಲಿ ಭೇಟಿ ಮಾಡಿ ಅನುದಾನಿತ ಪದವಿ ಪೂರ್ವ ಕಾಲೇಜು ನೌಕರರ ಸಮಸ್ಯೆಗಳನ್ನು ಮುಂಬರುವ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು ಬಗೆಹರಿಸಲು ಮನವಿ ಸಲ್ಲಿಸಲಾಯಿತು.

ಈ ಕುರಿತು ಕಿಟ್ಟೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಠಲ್ , ಪೆರ್ನೆ ಶ್ರೀ ರಾಮಚಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಶೇಖರ್ ರೈ, ತುಂಬೆ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ವಿ.ಎಸ್. ಭಟ್, ವಿಠಲ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಆದರ್ಶ , ಬಜಪೆ ಸೈಂಟ್ ಜೋಸೆಫ್ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರ ಉಡುಪ ಹಾಗೂ ಕಾಲೇಜುಗಳ ಎಲ್ಲಾ ಉಪನ್ಯಾಸಕರು,ಅಲ ನಿರಂಜನಸ್ವಾಮಿ ಕಾಲೇಜು ಸುಂಕದಕಟ್ಟೆ,ಶ್ರೀ ಸತ್ಯಸಾಯಿ ಕಾಲೇಜು ಅಳಿಕೆ ಇಲ್ಲಿನ ಹಾಗೂ ಎಡಪದವು ಪ.ಪೂ.ಕಾಲೇಜಿನ ಎಲ್ಲಾ ಸಿಬ್ಬಂದಿಗಳು ತಮ್ಮ ಸಮಸ್ಯೆಗಳ ಅಹವಾಲನ್ನು ತೋಡಿಕೊಂಡರು.
ಶಾಸಕರು ತಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ತಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು