9:39 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಅನುದಾನಿತ ಪ.ಪೂ. ಕಾಲೇಜುಗಳ ಬೋಧಕ-ಬೋಧಕೇತರ ಸಂಘದಿಂದ ಬಂಟ್ವಾಳ ಶಾಸಕರ ಭೇಟಿ

09/12/2024, 21:05

ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಅನುದಾನಿತ ಪ.ಪೂ.ಕಾಲೇಜುಗಳ ಬೋಧಕ-ಬೋಧಕೇತರ ಸಂಘದ ವತಿಯಿಂದ ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯಕ್ ಅವರನ್ನು ಅವರ ಒಡ್ಡೂರು ಫಾರ್ಮ್ಸ್ ನಿವಾಸದಲ್ಲಿ ಭೇಟಿ ಮಾಡಿ ಅನುದಾನಿತ ಪದವಿ ಪೂರ್ವ ಕಾಲೇಜು ನೌಕರರ ಸಮಸ್ಯೆಗಳನ್ನು ಮುಂಬರುವ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು ಬಗೆಹರಿಸಲು ಮನವಿ ಸಲ್ಲಿಸಲಾಯಿತು.

ಈ ಕುರಿತು ಕಿಟ್ಟೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಠಲ್ , ಪೆರ್ನೆ ಶ್ರೀ ರಾಮಚಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಶೇಖರ್ ರೈ, ತುಂಬೆ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ವಿ.ಎಸ್. ಭಟ್, ವಿಠಲ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಆದರ್ಶ , ಬಜಪೆ ಸೈಂಟ್ ಜೋಸೆಫ್ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರ ಉಡುಪ ಹಾಗೂ ಕಾಲೇಜುಗಳ ಎಲ್ಲಾ ಉಪನ್ಯಾಸಕರು,ಅಲ ನಿರಂಜನಸ್ವಾಮಿ ಕಾಲೇಜು ಸುಂಕದಕಟ್ಟೆ,ಶ್ರೀ ಸತ್ಯಸಾಯಿ ಕಾಲೇಜು ಅಳಿಕೆ ಇಲ್ಲಿನ ಹಾಗೂ ಎಡಪದವು ಪ.ಪೂ.ಕಾಲೇಜಿನ ಎಲ್ಲಾ ಸಿಬ್ಬಂದಿಗಳು ತಮ್ಮ ಸಮಸ್ಯೆಗಳ ಅಹವಾಲನ್ನು ತೋಡಿಕೊಂಡರು.
ಶಾಸಕರು ತಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ತಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು