3:39 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ; ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

09/12/2024, 21:32

ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆಯು ಭಾನುವಾರ ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಿತು.
ಬೆಳಿಗ್ಗೆ 6ರಿಂದ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.
ಮಧ್ಯಾಹ್ನ 1 ಗಂಟೆಯಿಂದ ವಿಜಯ ಭಾಸ್ಕರ್ ಮತ್ತು ಗಣೇಶ್ ಮಂಗಳೂರು ಅವರಿಂದ “ಭಕ್ತಿಗಾನ ಸುಧೆ” ಸಂಜೆ 4 ಗಂಟೆಯಿಂದ “ಸ್ಪೂರ್ತಿ ಮಹಿಳಾ ಭಜನಾ ಮಂಡಳಿ” ಪದವಿನಂಗಡಿ ಮತ್ತು ಶ್ರೀ ನಾರಾಯಣಗುರು ಸೇವಾಸಂಘ, ಮೇರಿಹಿಲ್, ಗುರುನಗರ ಅವರಿಂದ ” ಭಜನೆ ಹಾಗೂ ಹರಿನಾಮ ಸಂಕೀರ್ತನೆ ನಡೆಯಿತು.
ಸಂಜೆ 7 ಗಂಟೆಗೆ ಅಗೆಲು ಸೇವೆ ನಡೆದು, ಬಳಿಕ ಅನ್ನಸಂತರ್ಪಣೆ ನೆರವೇರಿತು.


ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಕಮಲಾದೇವಿ ಅಸ್ರಣ ಅವರು ಆಶೀರ್ವಚನ ನೀಡಿದರು. ನಿರೂಪಕ ನವನೀತ್ ಶೆಟ್ಟಿ ಕದ್ರಿ, ಉದ್ಯಮಿಗಳಾದ ಲೀಲಾಕ್ಷ ಕರ್ಕೇರಾ, ಎಂ. ಅಶೋಕ್ ಶೇಟ್, ಲಚ್ಚು ಲಾಲ್, ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು