11:10 AM Saturday21 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಸಂಸತ್ತಿಗೆ ಆಯ್ಕೆಯಾದ ಇಬ್ಬರು ಮಾಜಿ ಸಿಎಂಗಳಿಗೂ ಆಸನದ ವ್ಯವಸ್ಥೆ!

09/12/2024, 23:41

ಬೆಳಗಾವಿ(reporterkarnataka.com): ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆದ್ದ ಇಬ್ಬರು ನೂತನ ಶಾಸಕರಿಗೆ ಆಸನದ ವ್ಯವಸ್ಥೆ ಮಾಡುವ ಬದಲು ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ವ್ಯವಸ್ಥೆ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನಡೆದಿದೆ. ಇತ್ತೀಚೆಗೆ ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಯಲ್ಲಿ ಗೆದ್ದಿರುವ ನೂತನ ಶಾಸಕರಿಗೆ ಆಸನ ವ್ಯವಸ್ಥೆಯನ್ನು ಮಾಡಬೇಕಿತ್ತು. ಆದರೆ, ಈ ವಿಚಾರದಲ್ಲಿ ಎಡವಟ್ಟು ಆಗಿದೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. ಆದರೆ, ನೂತನ ಸಂಸದರಾಗಿರುವ ಇಬ್ಬರು ಮಾಜಿ ಸಿಎಂಗಳಿಗೂ ಆಸನ ಮೀಸಲಿರಿಸಲಾಗಿದೆ.
ಸುವರ್ಣ ವಿಧಾನಸಭೆಯಲ್ಲಿ ಮಾಜಿ ಶಾಸಕರ ಹೆಸರಿನಲ್ಲಿ ಆಸನ ಮೀಸಲಾಗಿಟ್ಟು ಬೆಳಗಾವಿ ಜಿಲ್ಲಾಡಳಿತ ನಗೆಪಾಟಿಲಿಗೀಡಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಹೆಸರಲ್ಲಿ ಆಸನಗಳು ಮೀಸಲಿರಿಸಲಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು