9:18 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಜಲಜೀವನ ಮಿಷನ್ ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

09/12/2024, 23:55

ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು.
ಜಲಜೀವನ ಮಿಷನ್ ಯೋಜನೆಯಲ್ಲಿ ನೀರಿನ ಮೂಲಗಳು ಅನುಷ್ಠಾನವಾಗದ ಕುರಿತು ಪ್ರಸ್ತಾಪಿಸಿ ಶೀಘ್ರವಾಗಿ ಯೋಜನೆಗೆ ಸಂಬಂಧಿಸಿದ ನೀರಿನ ಮೂಲಗಳನ್ನು ಪ್ರಥಮವಾಗಿ ಶೋಧಿಸಿ ಅಳವಡಿಸುವ ಮೂಲಕ ಸಮರ್ಪಕ ಅನುಷ್ಠಾನಕ್ಕಾಗಿ ಶೂನ್ಯ ವೇಳೆಯಲ್ಲಿ ಸರಕಾರವನ್ನು ಒತ್ತಾಯಿಸಿದರು.
ಮಳೆಗಾಲ ಮುಗಿದು ಚಳಿ ಕಾಲಿರಿಸಿದ್ದರೂ ಕರಾವಳಿಯಲ್ಲಿ ಜಲಜೀವನ ಮಿಷನ್ ಕಾಮಗಾರಿ ಪುನರಾರಂಭವಾಗಿಲ್ಲ. ಮಳೆಗಾಲಕ್ಕೆ ಪೂರ್ವದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವಿವಿಧೆಡೆ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಮರಳಿ ಚಾಲನೆ ಸಿಕ್ಕಿಲ್ಲ. ಒಟ್ಟಿನಲ್ಲಿ ಜಲಜೀವನ್ ಮಿಷನ್‌ ಗೆ ಜೀವ ಇಲ್ಲದಂತಾಗಿದೆ. ಮನೆ ಮನೆಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಕೇಂದ್ರ ಸರಕಾರದ ಯೋಜನೆ ಇದಾಗಿದೆ. ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗಳ ಆವರಣದಲ್ಲಿ ನಲ್ಲಿ ನೀರು ಹಿಡಿಯಲು ಬೇಕಾದ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ನಲ್ಲಿ ಮೂಲಕ ನೀರು ಪೂರೈಸುವ ಪ್ರಕ್ರಿಯೆ ಆರಂಭವಾಗಿಲ್ಲ. ದಾಖಲೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 2,94,409 2,05,807 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಜಲಜೀವನ್ ಮಿಷನ್ ಕಾಮಗಾರಿಗಾಗಿ ಅಲ್ಲಲ್ಲಿ ಪೈಪ್ ಲೈನ್ ಅಗೆದು ‎ಮಣ್ಣು ತುಂಬಿದ್ದಾರೆ. ಇನ್ನು ಕೆಲವು ಕಡೆ ಪೈಪ್‌ಲೈನ್ ಪೂರ್ತಿಯಾಗಿ ಅಳವಡಿಸಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅಡಚಣೆ ಉಂಟಾಗಿದೆ.
ಆದ್ದರಿಂದ ಈ ಯೋಜನೆಗೆ ಸಂಬಂಧಿಸಿದಂತೆ ನೀರಿನ ಮೂಲವನ್ನು ಮೊದಲು ಶೋಧಿಸಿ ಅನುಷ್ಠಾನ ಮಾಡುವ ಜೊತೆಗೆ ಆದಷ್ಟು ಬೇಗ ಕಾಮಗಾರಿಯನ್ನು ಪುನರಾರಂಭಿಸಲು ಕ್ರಮಕೈಗೊಳ್ಳುವಂತೆ ಮಂಜುನಾಥ ಭಂಡಾರಿ ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು