10:56 AM Saturday21 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಗೃಹಿಣಿಯ ಬೆದರಿಸಿ ಕತ್ತಿನಿಂದ ಕರಿಮಣಿ ಸರ ಎಳೆದು ಆರೋಪಿ ಪರಾರಿ

10/12/2024, 12:27

ಬೆಳ್ತಂಗಡಿ(reporterkarnataka.com): ಇಲ್ಲಿನ ಕೊಯ್ಯೂರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ.
ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ
ಬೆಳ್ತಂಗಡಿಯಿಂದ ಮನೆಗೆ ಹೋಗುತ್ತಿದ್ದಾಗ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ಉಮೇಶ್ ಎಂಬಾತ ಹಿಂದಿನಿಂದ ಓಡಿ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ. ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು