2:17 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಗೃಹಿಣಿಯ ಬೆದರಿಸಿ ಕತ್ತಿನಿಂದ ಕರಿಮಣಿ ಸರ ಎಳೆದು ಆರೋಪಿ ಪರಾರಿ

10/12/2024, 12:27

ಬೆಳ್ತಂಗಡಿ(reporterkarnataka.com): ಇಲ್ಲಿನ ಕೊಯ್ಯೂರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ.
ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ
ಬೆಳ್ತಂಗಡಿಯಿಂದ ಮನೆಗೆ ಹೋಗುತ್ತಿದ್ದಾಗ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ನಿವಾಸಿ ಉಮೇಶ್ ಎಂಬಾತ ಹಿಂದಿನಿಂದ ಓಡಿ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ. ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು