1:33 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಹಿಳೆಯರ, ಯುವತಿಯರ ಬಗ್ಗೆ ಅಸಭ್ಯ ಪದ, ಅಶ್ಲೀಲ ಚಿತ್ರ: ಕೊನೆಗೂ ಸೆರೆ ಸಿಕ್ಕ ಸೈಕೋಪಾತ್; ಗ್ರಾಮದ ಮುಖಂಡನಿಂದಲೇ ಕೃತ್ಯ!

10/12/2024, 15:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಹಿಳೆಯರು,ಯುವತಿಯರ ಬಗ್ಗೆ ಅಸಭ್ಯ ಪದ ಹಾಗೂ ಅಶ್ಲೀಲ ಲೈಂಗಿಕ ಚಿತ್ರಗಳನ್ನ ಬಿಡಿಸಿ ಕೆಲವರ ಹೆಸರುಗಳನ್ನ ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಸೈಕೋಪಾತ್ ನನ್ನು ಗ್ರಾಮಸ್ಥರು ಹೊಂಚು ಹಾಕಿ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ವರದರಾಜಸ್ವಾಮಿ ಬಡಾವಣೆಯಲ್ಲಿ ನಡೆದಿದೆ.
ಗ್ರಾಮದಲ್ಲಿ ಸಮಸ್ಯೆಗಳು ಶುರುವಾದಾಗ ನ್ಯಾಯಕ್ಕಾಗಿ ನಿಲ್ಲುತ್ತಿದ್ದ ಮುಖಂಡನಿಂದಲೇ ಕೃತ್ಯ ನಡೆದಿದೆ. ಹಲವಾರು ದಿನಗಳಿಂದ ಸೈಕೋಪಾತ್ ನ ಹಿಡಿಯಲು ಗ್ರಾಮಸ್ಥರು ಹೊಂಚು ಹಾಕಿದ್ದು ನಿನ್ನೆ ರಾತ್ರಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಸಾಕ್ಷಿ ಸಮೇತ ಈತನನ್ನ ಹಿಡಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ವರದರಾಜಸ್ವಾಮಿ ಬಡಾವಣೆ ನಿವಾಸಿ ಹಾಗೂ ಗ್ರಾಮದ ಮುಖಂಡ ಶಿವಣ್ಣ(54) ಸಿಕ್ಕಿ ಬಿದ್ದ ಸೈಕೋಪಾತ್. ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನ ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳ ಜೊತೆ ಉಲ್ಲೇಖಿಸಿ ಸುಮಾರು 50ಕ್ಕೂ ಹೆಚ್ಚು ಮನೆಗಳ ಮುಂದೆ ಇಟ್ಟಿದ್ದ ಎನ್ನಲಾಗಿದೆ.
ಇದರಿಂದಾಗಿ ಗ್ರಾಮದಲ್ಲಿ ಕೆಲ ಮಹಿಳೆಯರಿಗೆ ಹಾಗೂ ಅವರ ಕುಟುಂಬದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದವು. ಈ ಘಟನೆಯಿಂದಾಗಿ ಕೆಲವು ಮದುವೆ ಸಂಬಂಧಗಳು ಸಹ ಮುರಿದು ಬಿದ್ದಿದ್ದವು. ಮನೆಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದ ಅಸಭ್ಯ ಚಿತ್ರಗಳುಳ್ಳ ಚೀಟಿಗಳು ಗ್ರಾಮವನ್ನೇ ಚಿಂತೆಗೆ ಈಡು ಮಾಡಿತ್ತು.
ಸೈಕೋಪಾತ್ ನನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಗ್ರಾಮಸ್ಥರು ಹಲವಾರು ದಿನಗಳಿಂದ ಹೊಂಚು ಹಾಕುತ್ತಿದ್ದರು. ನಿನ್ನೆ ತಡರಾತ್ರಿ ಸೈಕಲ್ ನಲ್ಲಿ ಬಂದ ಶಿವಣ್ಣ ಮನೆ ಮುಂದೆ ಚೀಟಿಯನ್ನ ಇಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಿಸಿ ಬಿಸಿ ಕಜ್ಜಾಯಗಳನ್ನ ಕೊಟ್ಟ ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.
ಶಿವಣ್ಣನ ವಿರುದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಿಸಿರುವ ಹುಲ್ಲಹಳ್ಳಿ ಠಾಣೆ ಪೊಲೀಸರು ಕಂಬಿ ಎಣಿಸಲು ಕಳಿಸಿದ್ದಾರೆ.
ಇದರಿಂದಾಗಿ ಈಗ ಗ್ರಾಮದ ವರದರಾಜ ಸ್ವಾಮಿ ಬಡಾವಣೆಯ ನಿವಾಸಿಗಳು ಸೈಕೋ ಶಿವಣ್ಣನಿಗೆ ಇಡಿ ಶಾಪ ಹಾಕಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು