7:46 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರ ಮನವಿ

10/12/2024, 17:42

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರಾದ ಶಿವು ರಾಠೋಡ ಅವರಿಂದ ಯಾದಗಿರಿ ಜಿಲ್ಲೆ ಯೋಜನಾ ನಿರ್ದೇಶಕರಾದ ( DRDA) ಚೆನ್ನಬಸವರಾಜ ದೇವರಮನಿ ಅವರಿಗೆ ಲಮನವಿ ಪತ್ರ ಸಲ್ಲಿಸಲಾಯಿತು.
ನಾರಾಯಣಪುರ, ಬರದೇವನಾಳ, ಬೈಲಕುಂಟಿ, ಕಾಮನಟಗಿ ಹಾಗೂ ಬೈಚಬಾಳ ಈ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸರಕಾರ ಹೊರಡಿಸಿರುವ ನಿಯಮಗಳನ್ನು ಒಂದು ಪಾಲಿಸದೆ ತಮ್ಮ ಮನ – ಇಚ್ಛೆ ಬಂದಂತೆ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಗಳನ್ನು ಮಾಡಿರೋದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಶಿವು ರಾಠೋಡ ಆರೋಪಿಸಿದ್ದಾರೆ.
ಈ ಮೇಲ್ಕಂಡ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಯ ಸರಕಾರದ ನಿಯಮ ಅನುಸಾರ ಲೈವ್ ಯೂಟ್ಯೂಬ್ ವಿಡಿಯೋ ಹಾಗೂ ಜಿ.ಪಿ.ಎಸ್. ಫೋಟೋ ಸಮೇತ ಮಾಡುವುದು ಒಂದು ನಿಯಮವಾಗಿದೆ. ಆದರೆ ಇಲ್ಲಿರುವ ಅಧಿಕಾರಿಗಳಾದ ಪಿಡಿಓ ಹಾಗೆ ನೋಡಲ್ ಅಧಿಕಾರಿಗಳು ಅದರ ಜೊತೆಯಲ್ಲಿ ಹುಣಸಗಿ ತಾಲೂಕು ಲೆಕ್ಕ ಪರಿಶೋಧನಾ ವರದಿಯ ಅಧಿಕಾರಿಗಳಾದ ಸಿದ್ದನಗೌಡನವರು ಸರಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಖಂಡನೆ ಅಪರಾಧವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು