5:32 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರ ಮನವಿ

10/12/2024, 17:42

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷರಾದ ಶಿವು ರಾಠೋಡ ಅವರಿಂದ ಯಾದಗಿರಿ ಜಿಲ್ಲೆ ಯೋಜನಾ ನಿರ್ದೇಶಕರಾದ ( DRDA) ಚೆನ್ನಬಸವರಾಜ ದೇವರಮನಿ ಅವರಿಗೆ ಲಮನವಿ ಪತ್ರ ಸಲ್ಲಿಸಲಾಯಿತು.
ನಾರಾಯಣಪುರ, ಬರದೇವನಾಳ, ಬೈಲಕುಂಟಿ, ಕಾಮನಟಗಿ ಹಾಗೂ ಬೈಚಬಾಳ ಈ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಸರಕಾರ ಹೊರಡಿಸಿರುವ ನಿಯಮಗಳನ್ನು ಒಂದು ಪಾಲಿಸದೆ ತಮ್ಮ ಮನ – ಇಚ್ಛೆ ಬಂದಂತೆ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಗಳನ್ನು ಮಾಡಿರೋದು ಕಾನೂನು ಬಾಹಿರ ಚಟುವಟಿಕೆಯಾಗಿದೆ ಎಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಶಿವು ರಾಠೋಡ ಆರೋಪಿಸಿದ್ದಾರೆ.
ಈ ಮೇಲ್ಕಂಡ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನ ಗ್ರಾಮ ಸಭೆಯ ಸರಕಾರದ ನಿಯಮ ಅನುಸಾರ ಲೈವ್ ಯೂಟ್ಯೂಬ್ ವಿಡಿಯೋ ಹಾಗೂ ಜಿ.ಪಿ.ಎಸ್. ಫೋಟೋ ಸಮೇತ ಮಾಡುವುದು ಒಂದು ನಿಯಮವಾಗಿದೆ. ಆದರೆ ಇಲ್ಲಿರುವ ಅಧಿಕಾರಿಗಳಾದ ಪಿಡಿಓ ಹಾಗೆ ನೋಡಲ್ ಅಧಿಕಾರಿಗಳು ಅದರ ಜೊತೆಯಲ್ಲಿ ಹುಣಸಗಿ ತಾಲೂಕು ಲೆಕ್ಕ ಪರಿಶೋಧನಾ ವರದಿಯ ಅಧಿಕಾರಿಗಳಾದ ಸಿದ್ದನಗೌಡನವರು ಸರಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಖಂಡನೆ ಅಪರಾಧವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು