10:39 AM Tuesday9 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

ನಂಜನಗೂಡು ನಗರಸಭೆ: ನೂತನ ಪೌರಾಯುಕ್ತರಾಗಿ ವಿಜಯ್ ಅಧಿಕಾರ ಸ್ವೀಕಾರ

10/12/2024, 18:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರ ಸಭೆಯ ನೂತನ ಪೌರಾಯುಕ್ತರಾಗಿ ವಿಜಯ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಹಿಂದಿನ ಪೌರಾಯುಕ್ತ ನಂಜುಂಡಸ್ವಾಮಿ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಮಡಿಕೇರಿಯಲ್ಲಿ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್ ಅವರು ನಂಜನಗೂಡಿಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.
2019ರಲ್ಲಿ ಪುರಸಭೆಯಿಂದ ನಗರಸಭೆಗೆ ಬಡ್ತಿ ಪಡೆದ ಸಂದರ್ಭ ಮೊದಲ ಪೌರಾಯುಕ್ತರಾಗಿ ಈ ಹಿಂದೆ ನಂಜನಗೂಡು ನಗರ ಸಭೆಯಲ್ಲಿ ಅವರು ಕಾರ್ಯನಿರ್ವಹಿಸಿದ್ದು,
ಈಗ ಎರಡನೇ ಬಾರಿಗೆ ಬಂದು ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ನಗರಸಭೆಯಲ್ಲಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಅವರು ನಂಜನಗೂಡಿನ ಕೆಲವು ಸವಾಲು ಹಾಗೂ ಸಮಸ್ಯೆಗಳನ್ನು ಎದುರಿಸಿ ನಗರಸಭೆಯ ಅಭಿವೃದ್ಧಿಗೆ ಮುಂದಾಗುತ್ತಾರೆಂಬ ಭರವಸೆ ನಂಜನಗೂಡಿನ ನಾಗರೀಕರಲ್ಲಿದೆ.
ನಗರಸಭೆಯ ನೂತನ ಆಯುಕ್ತರಾದ ವಿಜಯ್ ಅವರು ಮಾತನಾಡಿ, ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ಪವಿತ್ರ ಪುಣ್ಯಕ್ಷೇತ್ರ ಈ ನಂಜುಂಡೇಶ್ವರನ ಸನ್ನಿಧಿಯಲ್ಲಿ ಎರಡನೇ ಬಾರಿಗೆ ಕೆಲಸ ಮಾಡುವ ಪುಣ್ಯ ಸಿಕ್ಕಿದೆ. ಹಾಗಾಗಿ ಕ್ಷೇತ್ರದ ಶಾಸಕರು, ಸಂಸದರು, ಸಚಿವರು ಸೇರಿದಂತೆ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಸದಸ್ಯರುಗಳು ಮತ್ತು ಸಹೋದ್ಯೋಗಿ ಅಧಿಕಾರಿಗಳ ಸಹಕಾರದಿಂದ ಉತ್ತಮ ಕೆಲಸ ಮಾಡಿ ನಗರಸಭೆ ಅಭಿವೃದ್ಧಿ ಗೆ ಶ್ರಮಿಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು