6:53 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ನಂಜನಗೂಡು ನಗರಸಭೆ: ನೂತನ ಪೌರಾಯುಕ್ತರಾಗಿ ವಿಜಯ್ ಅಧಿಕಾರ ಸ್ವೀಕಾರ

10/12/2024, 18:46

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರ ಸಭೆಯ ನೂತನ ಪೌರಾಯುಕ್ತರಾಗಿ ವಿಜಯ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಹಿಂದಿನ ಪೌರಾಯುಕ್ತ ನಂಜುಂಡಸ್ವಾಮಿ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಮಡಿಕೇರಿಯಲ್ಲಿ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್ ಅವರು ನಂಜನಗೂಡಿಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.
2019ರಲ್ಲಿ ಪುರಸಭೆಯಿಂದ ನಗರಸಭೆಗೆ ಬಡ್ತಿ ಪಡೆದ ಸಂದರ್ಭ ಮೊದಲ ಪೌರಾಯುಕ್ತರಾಗಿ ಈ ಹಿಂದೆ ನಂಜನಗೂಡು ನಗರ ಸಭೆಯಲ್ಲಿ ಅವರು ಕಾರ್ಯನಿರ್ವಹಿಸಿದ್ದು,
ಈಗ ಎರಡನೇ ಬಾರಿಗೆ ಬಂದು ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ನಗರಸಭೆಯಲ್ಲಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಅವರು ನಂಜನಗೂಡಿನ ಕೆಲವು ಸವಾಲು ಹಾಗೂ ಸಮಸ್ಯೆಗಳನ್ನು ಎದುರಿಸಿ ನಗರಸಭೆಯ ಅಭಿವೃದ್ಧಿಗೆ ಮುಂದಾಗುತ್ತಾರೆಂಬ ಭರವಸೆ ನಂಜನಗೂಡಿನ ನಾಗರೀಕರಲ್ಲಿದೆ.
ನಗರಸಭೆಯ ನೂತನ ಆಯುಕ್ತರಾದ ವಿಜಯ್ ಅವರು ಮಾತನಾಡಿ, ದಕ್ಷಿಣ ಕಾಶಿ ಎಂದು ಪ್ರಸಿದ್ಧಿ ಪಡೆದಿರುವ ಪವಿತ್ರ ಪುಣ್ಯಕ್ಷೇತ್ರ ಈ ನಂಜುಂಡೇಶ್ವರನ ಸನ್ನಿಧಿಯಲ್ಲಿ ಎರಡನೇ ಬಾರಿಗೆ ಕೆಲಸ ಮಾಡುವ ಪುಣ್ಯ ಸಿಕ್ಕಿದೆ. ಹಾಗಾಗಿ ಕ್ಷೇತ್ರದ ಶಾಸಕರು, ಸಂಸದರು, ಸಚಿವರು ಸೇರಿದಂತೆ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಸದಸ್ಯರುಗಳು ಮತ್ತು ಸಹೋದ್ಯೋಗಿ ಅಧಿಕಾರಿಗಳ ಸಹಕಾರದಿಂದ ಉತ್ತಮ ಕೆಲಸ ಮಾಡಿ ನಗರಸಭೆ ಅಭಿವೃದ್ಧಿ ಗೆ ಶ್ರಮಿಸುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು