5:31 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ

11/12/2024, 12:32

ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್‌ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.


ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ರವರಿಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ, ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಢನೀಯ ಕಮೀಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ. ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು.
ಹೋರಾಟದ ನೇತೃತ್ವವನ್ನು ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು