8:34 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ

11/12/2024, 12:32

ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್‌ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.


ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ರವರಿಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ, ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಢನೀಯ ಕಮೀಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ. ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು.
ಹೋರಾಟದ ನೇತೃತ್ವವನ್ನು ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು