3:40 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ

11/12/2024, 12:32

ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ‌ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್‌ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್‌ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.


ಸಭೆಯನ್ನು ಉದ್ದೇಶಿಸಿ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮಾಜಿ‌ ಉಪಮೇಯರ್ ಕೆ. ಮಹಮ್ಮದ್ ಮಾತನಾಡಿ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ರವರಿಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಹೋರಾಡುವವರ ಬಗ್ಗೆ ಅಲರ್ಜಿ ಇದೆ, ಒಬ್ಬ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗೆ ಇಂತಹ ಮನಸ್ಥಿತಿ ಸರಿಯಲ್ಲ, ಜನಪರ ಹೋರಾಟಗಳಿಗೆ ಕಡಿವಾಣ ಹಾಕುವ ಹೊಸ ಸಂಪ್ರದಾಯ ಪೋಲೀಸ್ ಇಲಾಖೆ ಸೃಷ್ಟಿಸುತ್ತಿರುವುದು ಖಂಢನೀಯ ಕಮೀಷನರ್ ವರ್ಗಾವಣೆ ಆಗುವವರೆಗೆ ಸಮಾನ ಮನಸ್ಕ ಹೋರಾಟಗಾರರು ನಿರಂತರ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು.
ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ ಬಂಡವಾಳಶಾಹಿ ಆಡಳಿತ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳು ಹೆಚ್ಚಳವಾಗುತ್ತಿವೆ. ಇವುಗಳ ಪರಿಹಾರಕ್ಕೆ ಹೋರಾಟವಲ್ಲದೆ ಬೇರೆ ದಾರಿಯಿಲ್ಲ. ಪೋಲೀಸ್ ಆಯುಕ್ತರು ಇಂತಹ ಅನಿವಾರ್ಯ ಹೋರಾಟಗಳಿಗೆ ಕಡಿವಾಣ ಹಾಕಲು ಹೊರಟಿರಿವುದು ಸಂವಿಧಾನ ಬದ್ದ ಹಕ್ಕನ್ನು ಕಿತ್ತುಕೊಂಡಂತೆ. ಆಯುಕ್ತರ ಗೊಡ್ಡು ಬೆದರಿಕೆಗಳಿಗೆ ನಾವು ಹಿಂಜರಿಯುವುದಿಲ್ಲ. ಜೈಲಿಗೆ ಹೋದರೂ ಸರಿ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಮುಖಂಡ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ಮುಖಂಡರಾದ ನವೀನ್ ‌ಕೊಂಚಾಡಿ, ಸಾಮಾಜಿಕ ಮುಂದಾಳು ರಿಯಾಝ್ ಹುಸೈನ್ ಮಾತನಾಡಿದರು.
ಹೋರಾಟದ ನೇತೃತ್ವವನ್ನು ಅನಿಲ್‌ ಡಿಸೋಜ, ನೌಶಾದ್, ರೆಹೆಮಾನ್ ಕುಂಜತ್ತಬೈಲ್, ಮುಸ್ತಾಫ, ಪ್ರಮೀಳಾ, ಆಶಾ ಗಣೇಶ್, ಚರಣ್ ಶೆಟ್ಟಿ, ಸೌಮ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು