2:16 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಡಿ.17: ಯಕ್ಷ ಪ್ರತಿಭೆ ಮಂಗಳೂರು 16ನೇ ವರ್ಷದ ಸಂಭ್ರಮ; ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ

12/12/2024, 12:37

ಮಂಗಳೂರು(reporterkarnataka.com): ಯಕ್ಷ ಪ್ರತಿಭೆ ಮಂಗಳೂರು ಇದರ 16ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.17ರಂದು ಸಂಜೆ 5:45ರಿಂದ ನಗರದ ಮಂಗಳಾದೇವಿ ದೇವಸ್ಥಾನದ ಮುಂಭಾಗ ನಡೆಯಲಿದೆ ಎಂದು ಸಂಘಟನೆ ಅಧ್ಯಕ್ಷ ಸಂಜಯ್ ಕುಮಾರ್ ಶೆಟ್ಟಿ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಈ ವರ್ಷದ ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ದಕಟ್ಟೆ ಅವರಿಗೆ ನೀಡಲಾಗುವುದು. ಅಸ್ರಣ್ಣ ಗೌರವ ಸನ್ಮಾನವನ್ನು ಖ್ಯಾತ ಹೃದಯ ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಅವರಿಗೆ, ಯಕ್ಷ ಸನ್ಮಾನ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಖ್ಯಾತ ಮೃದಂಗ ವಾದಕರು ಹಾಗೂ ಜನಾರ್ದನ ಅಮ್ಮುಂಜೆ ಸಂಘಟಕರು ಹಾಗೂ ಖ್ಯಾತ ನಿರೂಪಕರಿಗೆ ನೀಡಲಾಗುವುದು ಎಂದರು.
ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣ ಶುಭ ಹಾರೈಸಲಿದ್ದು ನಳಿನ್ ಕುಮಾರ್ ಕಟೀಲು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅದಾನಿ ಗ್ರೂಪ್ ನ ಕಿಶೋರ್ ಆಳ್ವ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಮೇಯರ್ ಮನೋಜ್ ಕುಮಾರ್, ಅರುಣ್ ಐತಾಳ್ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು, ಗೌರವ ಸಲಹೆಗಾರ ಅಗರಿ ರಾಘವೇಂದ್ರ ರಾವ್, ಸುಜಾತ ಶೆಟ್ಟಿ, ಮೋಹನ್ ದಾಸ್ ರೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು