2:31 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಚಳ್ಳಕೆರೆ ನಗರದಲ್ಲಿ ಯುಜಿಡಿ ನಿರ್ಮಾಣಕ್ಕೆ 260 ಕೋಟಿ ಅನುದಾನ ಒದಗಿಸಲು ಶಾಸಕ ರಘುಮೂರ್ತಿ ಆಗ್ರಹ

12/12/2024, 18:00

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmsil.com

ಚಳ್ಳಕೆರೆ ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 260 ಕೋಟಿ ರೂ.ಗಳ ಅನುದಾನ ಒದಗಿಸುವಂತೆ ಶಾಸಕ ಟಿ. ರಘುಮೂರ್ತಿ ಆಗ್ರಹಿಸಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯಡಿ ಮಾತನಾಡಿ, ಚಳ್ಳಕೆರೆ ನಗರವು ಬೆಳೆಯುತ್ತಿರುವ ವೇಗಕ್ಕೆ ಅನುಗುಣವಾಗಿ, ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ನಿರ್ಮಾಣಕ್ಕೆ ಅಗತ್ಯವಿರುವ 260 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಒತ್ತಾಯಿಸಿದರು.
ಚಳ್ಳಕೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ (ಯುಜಿಡಿ) ಕಲ್ಪಿಸಲು 2013ರಲ್ಲಿಯೇ ಪ್ರಸ್ತಾಪಿಸಲಾಗಿತ್ತು. ಬಳಿಕ 2021ರಲ್ಲಿ ಈ ಯೋಜನೆಗೆ 197 ಕೋಟಿ ರೂ. ಗಳ ಅಂದಾಜು ಮಾಡಲಾಗಿತ್ತು. ಇದೀಗ ಯೋಜನೆಯ ವೆಚ್ಚ 253 ಕೋಟಿ ರೂ. ಆಗಿದೆ. ಈಗ ಮತ್ತೊಮ್ಮೆ‌ ಮನವಿ ಸಲ್ಲಿಸಲಾಗುತ್ತಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಭೈರತಿ ಸುರೇಶ್ ಅವರು, 2015ರಲ್ಲಿ ಈ ಯೋಜನೆ 100 ಕೋಟಿ ರೂ. ಗಳ ವೆಚ್ಚದಲ್ಲಿ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಸುಮಾರು 260 ಕೋಟಿ ರೂ. ಗಳ ವೆಚ್ಚದ ಅಂದಾಜು ಮಾಡಲಾಗಿದೆ. ಹೀಗಾಗಿ ಹಣಕಾಸು ಇಲಾಖೆಯ ಸಲಹೆ ಪಡೆದು, ಹಣಕಾಸಿನ ಲಭ್ಯತೆ ನೋಡಿಕೊಂಡು, ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು