10:23 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ. 14ರಂದು 32ನೇ ವರ್ಷದ ದೀಫೋತ್ಸವ

12/12/2024, 19:25

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಪ್ರಸಿದ್ಧ ಐತಿಹಾಸಿಕ ದೇಗುಲವಾಗಿರುವ ಬಾಳೆಬೈಲಿನ ಸಿದ್ದೇಶ್ವರ ಬೆಟ್ಟದಲ್ಲಿ ಡಿ.14ರಂದು 32ನೇ ವರ್ಷದ ಕಾರ್ತಿಕ ದೀಪೋತ್ಸವದ ವೈಭವದಿಂದ ನಡೆಯಲಿದೆ.
ಸುಮಾರು 1000 ಅಡಿ ಬೆಟ್ಟದ ಮೇಲಿರುವ ದೇಗುಲಕ್ಕೆ ಸಾವಿರಾರು ಭಕ್ತರು ಈ ಸಂದರ್ಭದಲ್ಲಿ ಆಗಮಿಸಲಿದ್ದು ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
*ಪೂಜೆ, ದೀಪೋತ್ಸವ, ಅನ್ನ ಸಂತರ್ಪಣೆ:*
ಡಿ. 14ರ ಸಂಜೆ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ
ಅಲಂಕಾರ ನಂತರ ಸಿದ್ದೇಶ್ವರ ಸ್ವಾಮಿಗೆ ಪೂಜೆ,
ದೀಪೋತ್ಸವ ನೆಡೆಯಲಿದ್ದು ನಂತರ ಬಂದಿರುವ ಎಲ್ಲಾ ಭಕ್ತಾದಿಗಳಿಗೂ ಅನ್ನ ಸಂತರ್ಪಣೆ ನೆಡೆಯಲಿದೆ.ನಂತರ ಉದಯೋನ್ಮುಖ ಕಲಾವಿದರಾದ ರಾಘವೇಂದ್ರ ಮತ್ತು ಗುರುಪ್ರಸಾದ್ ಅವರಿಂದ ಕೊಳಲು ಹಾಗೂ ಸಾಕ್ರೋಫೋನ್ ವಾದನ ನಡೆಯಲಿದೆ.
ಡಿ. 15ರ ಸಂಜೆ 6:30ಕ್ಕೆ ಮಂದಾರ್ತಿ ಮಾದೇವಿ ನೃತ್ಯ ರೂಪಕ ಕಾರ್ಯಕ್ರಮ ನಡೆಯಲಿದೆ. ನಿಸರ್ಗ ಮಾತೆಯ ಮುಡಿಯಲ್ಲಿರುವ ಸಿದ್ದೇಶ್ವರ ಬೆಟ್ಟದ ತುದಿಯವರೆಗೆ ಜಗಮಗಿಸುವ ವಿದ್ಯುತ್ ದೀಪಾಲಂಕಾರ,ಸಿಡಿ ಮದ್ದಿನ ಜೇಂಕಾರದೊಂದಿಗೆ ಸ್ವಾಮಿಯ ದೀಪೋತ್ಸವ ವೀಕ್ಷಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಸಿದ್ದೇಶ್ವರ ಸಮಿತಿಯವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು