12:50 AM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ವಿಧಾನಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಖೇದ

12/12/2024, 21:10

ಬೆಳಗಾವಿ(reporterkarnataka.com) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ 2 ವರ್ಷಗಳಲ್ಲಿ 489.46 ಮೀ. ಸೌರಬೇಲಿ, 284.82 ಆನೆ ತಡೆ ಕಂದಕ ನಿರ್ಮಾಣ ಮತ್ತು ನಿರ್ವಹಣೆ ಮಾಡಲಾಗುತ್ತಿದೆ, ಜೊತೆಗೆ ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8 ಆನೆ ಕಾರ್ಯಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.
ರೇಡಿಯೋ ಕಾಲರ್ ಅಳವಡಿಸಿ ಆನೆಗಳ ಚಲನವಲನ ಗಮನಿಸಲಾಗುತ್ತಿದೆ. ಕಾಡಿನಂಚಿನ ಜನರಿಗೆ ಈ ಬಗ್ಗೆ ನಿತ್ಯ ಸಂದೇಶಗಳ ಮೂಲಕ, ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಕೃತಕಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಸಿ ವನ್ಯಜೀವಿಗಳ ಸಂಚಾರದ ಮೇಲೆ ನಿಗಾ ಇಡಲಾಗಿದೆ ಎಂದೂ ತಿಳಿಸಿದರು.
ವನ್ಯಜೀವಿ ದಾಳಿಯಿಂದ ಪ್ರಾಣಹಾನಿ ಆದಾಗ ಕುಟುಂಬದ ಸದಸ್ಯರಿಗೆ 15 ಲಕ್ಷ ರೂ., ಶಾಶ್ವತ ಅಂಗವಿಕಲತೆ ಉಂಟಾದರೆ 10 ಲಕ್ಷ ರೂ., ಭಾಗಶಃ –(ಶಾಶ್ವತವಾದ) ಅಂಗವಿಕಲತೆ ಉಂಟಾದರೆ 5 ಲಕ್ಷ ರೂ. ಗಾಯಗೊಂಡ ವ್ಯಕ್ತಿಗೆ 60 ಸಾವಿರ ರೂ. ಕಾಡಾನೆ ದಾಳಿಯಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಪ್ರತಿ ಪ್ರಕರಣಕ್ಕೆ 20 ಸಾವಿರ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. ಇದರ ಜೊತೆಗೆ ಮೃತರ ಕುಟುಂಬಕ್ಕೆ ಮತ್ತು ಶಾಶ್ವತ ಅಂಗವಿಕಲರಾದವರಿಗೆ ಮಾಸಿಕ 4 ಸಾವಿರ ರೂ. ಮಾಸಾಶನವನ್ನು 5 ವರ್ಷಗಳ ಕಾಲ ನೀಡಲಾಗುತ್ತಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಮನುಷ್ಯರಿಗೆ ಬದುಕುವ ಹಕ್ಕಿರುವಂತೆಯೇ ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು