4:55 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ವಿಧಾನಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಖೇದ

12/12/2024, 21:10

ಬೆಳಗಾವಿ(reporterkarnataka.com) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ 2 ವರ್ಷಗಳಲ್ಲಿ 489.46 ಮೀ. ಸೌರಬೇಲಿ, 284.82 ಆನೆ ತಡೆ ಕಂದಕ ನಿರ್ಮಾಣ ಮತ್ತು ನಿರ್ವಹಣೆ ಮಾಡಲಾಗುತ್ತಿದೆ, ಜೊತೆಗೆ ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8 ಆನೆ ಕಾರ್ಯಪಡೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.
ರೇಡಿಯೋ ಕಾಲರ್ ಅಳವಡಿಸಿ ಆನೆಗಳ ಚಲನವಲನ ಗಮನಿಸಲಾಗುತ್ತಿದೆ. ಕಾಡಿನಂಚಿನ ಜನರಿಗೆ ಈ ಬಗ್ಗೆ ನಿತ್ಯ ಸಂದೇಶಗಳ ಮೂಲಕ, ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಕೃತಕಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಸಿ ವನ್ಯಜೀವಿಗಳ ಸಂಚಾರದ ಮೇಲೆ ನಿಗಾ ಇಡಲಾಗಿದೆ ಎಂದೂ ತಿಳಿಸಿದರು.
ವನ್ಯಜೀವಿ ದಾಳಿಯಿಂದ ಪ್ರಾಣಹಾನಿ ಆದಾಗ ಕುಟುಂಬದ ಸದಸ್ಯರಿಗೆ 15 ಲಕ್ಷ ರೂ., ಶಾಶ್ವತ ಅಂಗವಿಕಲತೆ ಉಂಟಾದರೆ 10 ಲಕ್ಷ ರೂ., ಭಾಗಶಃ –(ಶಾಶ್ವತವಾದ) ಅಂಗವಿಕಲತೆ ಉಂಟಾದರೆ 5 ಲಕ್ಷ ರೂ. ಗಾಯಗೊಂಡ ವ್ಯಕ್ತಿಗೆ 60 ಸಾವಿರ ರೂ. ಕಾಡಾನೆ ದಾಳಿಯಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಪ್ರತಿ ಪ್ರಕರಣಕ್ಕೆ 20 ಸಾವಿರ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. ಇದರ ಜೊತೆಗೆ ಮೃತರ ಕುಟುಂಬಕ್ಕೆ ಮತ್ತು ಶಾಶ್ವತ ಅಂಗವಿಕಲರಾದವರಿಗೆ ಮಾಸಿಕ 4 ಸಾವಿರ ರೂ. ಮಾಸಾಶನವನ್ನು 5 ವರ್ಷಗಳ ಕಾಲ ನೀಡಲಾಗುತ್ತಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಮನುಷ್ಯರಿಗೆ ಬದುಕುವ ಹಕ್ಕಿರುವಂತೆಯೇ ವನ್ಯಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು